ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮದ ಸಚಿವರೊಟ್ಟಿಗೆ ಉದ್ಘಾಟನೆ ಮಾಡಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಸಚಿವ ವಿ ಸೋಮಣ್ಣ ಅವರು, ಬಳಿಕ ಪ್ರಧಾನಿ ಮಂತ್ರಿಯ ವಿಡಿಯೋ ಕಾನ್ಫರೆನ್ಸ್ ನೇರ ಪ್ರಸಾರದ ಕಾರ್ಯಕ್ರಮವನ್ನು ಸಚಿವ ಮುನಿಯಪ್ಪ, ರೈತರೊಂದಿಗೆ ವೀಕ್ಷಿಸಿದರು.

ರೈತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ಸಚಿವ ವಿ ಸೋಮಣ್ಣ ಅವರು, ರೈತರು ಸುಖಿಯಾಗಿರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 6 ಸಾವಿರ ರೂ,ಹಣ ಯಾವುದೇ ಮಧ್ಯವರ್ತಿಗಳಿಲ್ಲದೇ ರೈತರ ಖಾತೆಗೆ ನೇರವಾಗಿ ತಲುಪುತ್ತಿದ್ದು, ಪಿ.ಎಂ ಕಿಸಾನ್ ಯೋಜನೆಯಲ್ಲಿ 20ನೇ ಕಂತು ಒಳಗೊಂಡು ಇಲ್ಲಿಯ ತನಕ ದೇಶದಾದ್ಯಂತ 3.89 ಲಕ್ಷ ಕೋಟಿ ರೂ ಹಣವನ್ನು ರೈತರಿಗೆ ಸಂದಾಯ ಮಾಡಲಾಗಿದೆ. ಇಲ್ಲಿಯ ತನಕ ಕರ್ನಾಟಕ ರಾಜ್ಯದಲ್ಲಿ ರೂ,18.922 ಸಾವಿರ ಕೋಟಿ ಹಣ ಈ ಯೋಜನೆಯಲ್ಲಿ ರೈತರ ಖಾತೆಗೆ ಜಮೆ ಆಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 43.28.905 ಲಕ್ಷ ಕೋಟಿ ಅರ್ಹ ರೈತ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆದಿದ್ದಾರೆ. 2013-14ರಲ್ಲಿ ಕೇಂದ್ರದ ಕೃಷಿ ಬಜೆಟ್ ನಲ್ಲಿ ರೂ.21.933 ಸಾವಿರ ಕೋಟಿ ಇತ್ತು. ಈಗ ನರೇಂದ್ರ ಮೋದಿಯವರ ಸರ್ಕಾರದಲ್ಲಿ 2025-26ರಲ್ಲಿ 1,27,209 ಲಕ್ಷ ಕೋಟಿ ರೂ,ಗಳ ಕೃಷಿ ಬಜೆಟ್‌ನ್ನು ನೀಡಲಾಗಿದೆ. ಇಂದಿನ 20ನೇ ಕಂತಿನಲ್ಲಿ ದೇಶದಾದ್ಯಂತ ಸುಮಾರು 9.7 ಕೋಟಿ ರೈತರ ಖಾತೆಗೆ ಸುಮಾರು 20,800 ಕೋಟಿ ಹಣ ಸಂದಾಯವಾಗಲಿದೆ. ಅಂದಿನ ನಮ್ಮ ಸರ್ಕಾರದಿಂದ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ರೂ,6 ಸಾವಿರ ಜೊತೆಗೆ ರಾಜ್ಯ ಸರ್ಕಾರ 4 ಸಾವಿರ ನೀಡುತ್ತಿತ್ತು, ಇದನ್ನು ಈಗಿನ ಸರ್ಕಾರ ಜಾರಿಗೊಳಿಸಬೇಕಿದೆ ಎಂದರು. ಈ ಯೋಜನೆಯು ಮಹಿಳಾ ರೈತರ ಸಬಲೀಕರಣಕ್ಕೂ ಸಹಾಯಕಾರಿಯಾಗಿದ್ದು,
20ನೇ ಕಂತಿನಲ್ಲಿ ದೇಶದಾದ್ಯಂತ ಸುಮಾರು 2.26 ಕೋಟಿ ಮಹಿಳಾ ರೈತರು ಫಲಾನುಭವಿಗಳಿದ್ದಾರೆ ಎಂದು ತಿಳಿಸಿದರು.

ರೈತರಿಗೆ ರಸಗೊಬ್ಬರದ ಸಮಸ್ಯೆಯಿಲ್ಲ:

ರೈತರಿಗೆ ಯೂರಿಯ ಗೊಬ್ಬರ ಕೊರತೆಯನ್ನು ನಿವಾರಿಸಿದ್ದೇವೆ 6.52 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯತೆಯಿದ್ದು, ರಾಜ್ಯಕ್ಕೆ 15,825 ಸಾವಿರ ಮೆಟ್ರಿಕ್ ಟನ್ ಲಭ್ಯವಿದ್ದು, ಯೂರಿಯಾ ಮಾರಾಟ ಬೇಡಿಕೆಗಿಂದ ಹೆಚ್ಚಿದೆ ಎಂದರು.

ಇನ್ನೂ ಕೊರತೆ ಇದ್ದರೆ ಸರ್ಕಾರಕ್ಕೆ ತಿಳಿಸಬೇಕು. ನಮ್ಮ ಭಾರತ ಸರ್ಕಾರದ ಕಡೆಯಿಂದ ಉತ್ತಮ ಕೆಲಸಗಳಾಗಿವೆ,
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ದೇಶದ ಪ್ರಗತಿಯನ್ನು ಬಹುಶ 100 ರಿಂದ 500 ವರ್ಷಗಳ ಮೇಲ್ಪಂತಿಗೆ ಕೊಂಡೊಯ್ಯುತ್ತಿದ್ದಾರೆ. ರೈತರಿಗೆ 20,000 ಕೋಟಿಯನ್ನು ನೀಡುತ್ತಿದ್ದೇವೆ ಇದಕ್ಕೆ ಸಹಕರಿಸಿದ ಎಲ್ಲಾ ರೈತರಿಗೂ ಅಭಿನಂದನೆಗಳು ತಿಳಿಸುತ್ತೇನೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ತಿಳಿದು ಕೆಲಸ ಮಾಡಬೇಕು ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಮಾತನಾಡಿ, ರೈತರಿಗೆ ಯಾವುದೇ ಸಂಕಷ್ಟ ಆಗದಂತೆ ಅವರಿಗೆ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡುವುದು ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಸಂಕಷ್ಟದ ಕಣ್ಣಿರು ಒರೆಸಬೇಕಿದೆ. ಈ ದಿಸೆಯಲ್ಲಿ ಬಯಲುಸೀಮೆಯ ಜಿಲ್ಲೆಗಳಿಗೆ ನೀರುಣಿಸುವ ಎತ್ತಿನ ಹೊಳೆ ಯೋಜನೆ ಪ್ರಗತಿಯಲ್ಲಿದೆ. ಇದರೊಂದಿಗೆ ಈ ಹಿಂದೆ ಪರಮಶಿವಯ್ಯ ಅವರ ವರದಿಯನ್ನು ಸಹ ನಾವು ಜಾರಿಗೊಳಿಸಬೇಕಿದ್ದು, ಇದರಿಂದ ವ್ಯರ್ಥವಾಗಿ ಸಮುದ್ರ ಸೇರುವ 500 ಟಿಎಂಸಿ ನೀರು ಲಭ್ಯವಾಗಲಿದೆ. ಪ್ರಧಾನಿ ಮೋದಿ ಅವರಿಗೆ ಆಪ್ತರಾಗಿರುವ ಜಲಶಕ್ತಿ ಖಾತೆ ಹೊಂದಿರುವ ಸಚಿವ ಸೋಮಣ್ಣ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಸಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಂಗವಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳು ಹಾಗೂ ಕೃಷಿ ಪರಿಕರಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯ ಡಾ. ಕೆ.ಸುಧಾಕರ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಬಿ.ರಾಜಣ್ಣ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಬಿ.ಜಿ ಕಲಾವತಿ, ಉಪನಿರ್ದೇಶಕರು ಗಾಯಿತ್ರಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ. ಹನುಮಂತರಾಯ, ವಿವಿಧ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

9 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

12 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

14 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

14 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

21 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

22 hours ago