Categories: ಬೀದರ್

ಕಿ.ಮೀ.ವಾರು ವೃಕ್ಷ ಹನನಕ್ಕೆ ಅನುಮತಿ ಇಲ್ಲ- ವೃಕ್ಷ ಸಂಪತ್ತಿನ ಸಂರಕ್ಷಣೆಗೆ ಕಾಯಿದೆಗೆ ತಿದ್ದುಪಡಿ-ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ

 

ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಭಾಲ್ಕಿಯಲ್ಲಿಂದು ವಿಶ್ವ ಪರಿಸರ ದಿನದ ಅಂಗವಾಗಿ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ್ ಈ ಖಂಡ್ರೆ ಅವರೊಂದಿಗೆ ಗಿಡಗಳನ್ನು ನೆಟ್ಟ ಬಳಿಕ ಮಾತನಾಡಿದ ಅವರು, ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೂರಾರು ಮರ ಕಡಿತಲೆ ಮಾಡಿದ ದೂರುಗಳು ಬಂದಿದ್ದು, ಪ್ರಾಣವಾಯು ನೀಡುವ, ತಾಪಮಾನ ಹೆಚ್ಚಾಗದಂತೆ ತಡೆಯುವ ಹಾಗೂ ಭೂಫಲವತ್ತತೆ ಕಾಪಾಡುವ ವೃಕ್ಷಗಳ ಸಂರಕ್ಷಣೆಯ ಅಗತ್ಯವಿದೆ ಎಂದರು.

ಈ ನಿಟ್ಟಿನಲ್ಲಿ ಬೆಲೆ ಬಾಳುವ ಮರಗಳ ಸಂರಕ್ಷಣೆಗಾಗಿ ಪಟ್ಟಾ ಭೂಮಿ, ಗೋಮಾಳ ಮತ್ತು ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ತಿಳಿಸಿದರು.

ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

ಹೊಸ ಯೋಜನೆ: ಪರಿಸರ ಹಾನಿಯ ಅಧ್ಯಯನ:

ರಸ್ತೆ, ರೈಲು ಮಾರ್ಗ, ವಿದ್ಯುತ್ ಪ್ರಸರಣ ಮಾರ್ಗ, ಕೊಳವೆ ಮಾರ್ಗ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಯೋಜನೆ ಇರಲೀ ಅಥವಾ ಗಣಿಗಾರಿಕೆ, ಜಲಾಶಯ, ಬಡಾವಣೆ ನಿರ್ಮಾಣ, ಕೈಗಾರಿಕೆ ಸ್ಥಾಪನೆಯಂತಹ ಯಾವುದೇ ಯೋಜನೆ ಇರಲಿ, ಇದರಿಂದ ಪರಿಸರದ ಮೇಲೆ ಆಗುವ ಪರಿಣಾಮದ ಸಮಗ್ರ ಅಧ್ಯಯನ ಮಾಡುವ ಅಗತ್ಯವಿದೆ ಎಂಬುದನ್ನು ಇಲಾಖೆ ಮನಗಂಡಿದೆ.

ಯಾವುದೇ ಹೊಸ ಯೋಜನೆಗೆ ಬಿಡಿ ಬಿಡಿಯಾಗಿ (ಇಷ್ಟು ಕಿ.ಮೀ.ನಿಂದ ಇಂತಿಷ್ಟು ಕಿ.ಮೀ.ವರೆಗೆ) ಮರ ಕಡಿಯಲು ಅನುಮತಿ ನೀಡುವುದಕ್ಕೆ ಕಡಿವಾಣ ಹಾಕಿ, ಒಂದು ಯೋಜನೆಗೆ ಒಟ್ಟಾರೆ ಒಂದೇ ಬಾರಿ ಅನುಮತಿ ನೀಡಿ, ಪರ್ಯಾಯ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲೂ ಚಿಂತಿಸಲಾಗುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ವನಮಹೋತ್ಸವದ ವೇಳೆ ಗಿಡಗಳು ಆಳವಾಗಿ ಭೂಮಿಯಲ್ಲಿ ಬೇರು ಬಿಡುವಂತೆ ವೈಜ್ಞಾನಿಕವಾಗಿ ಸಸಿ ನೆಡುವಂತೆ ಸೂಚಿಸಲಾಗುವುದು. ಇದರಿಂದ ಬದುಕಿ ಉಳಿಯುವ ಸಸಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ ಎಂದರು.

ಬೀದರ್ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಸಾಗರ್ ಈಶ್ವರ ಖಂಡ್ರೆ, ಭಾಲ್ಕಿ ಹಿರೇಮಠದ ಡಾ. ಶ್ರೀ ಬಸವಲಿಂಗ ಪಟ್ಟದ್ದೇವರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

10 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

14 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

15 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

21 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

22 hours ago