Categories: ಬೀದರ್

ಕಿ.ಮೀ.ವಾರು ವೃಕ್ಷ ಹನನಕ್ಕೆ ಅನುಮತಿ ಇಲ್ಲ- ವೃಕ್ಷ ಸಂಪತ್ತಿನ ಸಂರಕ್ಷಣೆಗೆ ಕಾಯಿದೆಗೆ ತಿದ್ದುಪಡಿ-ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ

 

ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಭಾಲ್ಕಿಯಲ್ಲಿಂದು ವಿಶ್ವ ಪರಿಸರ ದಿನದ ಅಂಗವಾಗಿ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ್ ಈ ಖಂಡ್ರೆ ಅವರೊಂದಿಗೆ ಗಿಡಗಳನ್ನು ನೆಟ್ಟ ಬಳಿಕ ಮಾತನಾಡಿದ ಅವರು, ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೂರಾರು ಮರ ಕಡಿತಲೆ ಮಾಡಿದ ದೂರುಗಳು ಬಂದಿದ್ದು, ಪ್ರಾಣವಾಯು ನೀಡುವ, ತಾಪಮಾನ ಹೆಚ್ಚಾಗದಂತೆ ತಡೆಯುವ ಹಾಗೂ ಭೂಫಲವತ್ತತೆ ಕಾಪಾಡುವ ವೃಕ್ಷಗಳ ಸಂರಕ್ಷಣೆಯ ಅಗತ್ಯವಿದೆ ಎಂದರು.

ಈ ನಿಟ್ಟಿನಲ್ಲಿ ಬೆಲೆ ಬಾಳುವ ಮರಗಳ ಸಂರಕ್ಷಣೆಗಾಗಿ ಪಟ್ಟಾ ಭೂಮಿ, ಗೋಮಾಳ ಮತ್ತು ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ತಿಳಿಸಿದರು.

ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

ಹೊಸ ಯೋಜನೆ: ಪರಿಸರ ಹಾನಿಯ ಅಧ್ಯಯನ:

ರಸ್ತೆ, ರೈಲು ಮಾರ್ಗ, ವಿದ್ಯುತ್ ಪ್ರಸರಣ ಮಾರ್ಗ, ಕೊಳವೆ ಮಾರ್ಗ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಯೋಜನೆ ಇರಲೀ ಅಥವಾ ಗಣಿಗಾರಿಕೆ, ಜಲಾಶಯ, ಬಡಾವಣೆ ನಿರ್ಮಾಣ, ಕೈಗಾರಿಕೆ ಸ್ಥಾಪನೆಯಂತಹ ಯಾವುದೇ ಯೋಜನೆ ಇರಲಿ, ಇದರಿಂದ ಪರಿಸರದ ಮೇಲೆ ಆಗುವ ಪರಿಣಾಮದ ಸಮಗ್ರ ಅಧ್ಯಯನ ಮಾಡುವ ಅಗತ್ಯವಿದೆ ಎಂಬುದನ್ನು ಇಲಾಖೆ ಮನಗಂಡಿದೆ.

ಯಾವುದೇ ಹೊಸ ಯೋಜನೆಗೆ ಬಿಡಿ ಬಿಡಿಯಾಗಿ (ಇಷ್ಟು ಕಿ.ಮೀ.ನಿಂದ ಇಂತಿಷ್ಟು ಕಿ.ಮೀ.ವರೆಗೆ) ಮರ ಕಡಿಯಲು ಅನುಮತಿ ನೀಡುವುದಕ್ಕೆ ಕಡಿವಾಣ ಹಾಕಿ, ಒಂದು ಯೋಜನೆಗೆ ಒಟ್ಟಾರೆ ಒಂದೇ ಬಾರಿ ಅನುಮತಿ ನೀಡಿ, ಪರ್ಯಾಯ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲೂ ಚಿಂತಿಸಲಾಗುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ವನಮಹೋತ್ಸವದ ವೇಳೆ ಗಿಡಗಳು ಆಳವಾಗಿ ಭೂಮಿಯಲ್ಲಿ ಬೇರು ಬಿಡುವಂತೆ ವೈಜ್ಞಾನಿಕವಾಗಿ ಸಸಿ ನೆಡುವಂತೆ ಸೂಚಿಸಲಾಗುವುದು. ಇದರಿಂದ ಬದುಕಿ ಉಳಿಯುವ ಸಸಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ ಎಂದರು.

ಬೀದರ್ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಸಾಗರ್ ಈಶ್ವರ ಖಂಡ್ರೆ, ಭಾಲ್ಕಿ ಹಿರೇಮಠದ ಡಾ. ಶ್ರೀ ಬಸವಲಿಂಗ ಪಟ್ಟದ್ದೇವರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

34 minutes ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago