Categories: ಬೀದರ್

ಕಿ.ಮೀ.ವಾರು ವೃಕ್ಷ ಹನನಕ್ಕೆ ಅನುಮತಿ ಇಲ್ಲ- ವೃಕ್ಷ ಸಂಪತ್ತಿನ ಸಂರಕ್ಷಣೆಗೆ ಕಾಯಿದೆಗೆ ತಿದ್ದುಪಡಿ-ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ

 

ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಭಾಲ್ಕಿಯಲ್ಲಿಂದು ವಿಶ್ವ ಪರಿಸರ ದಿನದ ಅಂಗವಾಗಿ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ್ ಈ ಖಂಡ್ರೆ ಅವರೊಂದಿಗೆ ಗಿಡಗಳನ್ನು ನೆಟ್ಟ ಬಳಿಕ ಮಾತನಾಡಿದ ಅವರು, ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೂರಾರು ಮರ ಕಡಿತಲೆ ಮಾಡಿದ ದೂರುಗಳು ಬಂದಿದ್ದು, ಪ್ರಾಣವಾಯು ನೀಡುವ, ತಾಪಮಾನ ಹೆಚ್ಚಾಗದಂತೆ ತಡೆಯುವ ಹಾಗೂ ಭೂಫಲವತ್ತತೆ ಕಾಪಾಡುವ ವೃಕ್ಷಗಳ ಸಂರಕ್ಷಣೆಯ ಅಗತ್ಯವಿದೆ ಎಂದರು.

ಈ ನಿಟ್ಟಿನಲ್ಲಿ ಬೆಲೆ ಬಾಳುವ ಮರಗಳ ಸಂರಕ್ಷಣೆಗಾಗಿ ಪಟ್ಟಾ ಭೂಮಿ, ಗೋಮಾಳ ಮತ್ತು ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ತಿಳಿಸಿದರು.

ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

ಹೊಸ ಯೋಜನೆ: ಪರಿಸರ ಹಾನಿಯ ಅಧ್ಯಯನ:

ರಸ್ತೆ, ರೈಲು ಮಾರ್ಗ, ವಿದ್ಯುತ್ ಪ್ರಸರಣ ಮಾರ್ಗ, ಕೊಳವೆ ಮಾರ್ಗ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಯೋಜನೆ ಇರಲೀ ಅಥವಾ ಗಣಿಗಾರಿಕೆ, ಜಲಾಶಯ, ಬಡಾವಣೆ ನಿರ್ಮಾಣ, ಕೈಗಾರಿಕೆ ಸ್ಥಾಪನೆಯಂತಹ ಯಾವುದೇ ಯೋಜನೆ ಇರಲಿ, ಇದರಿಂದ ಪರಿಸರದ ಮೇಲೆ ಆಗುವ ಪರಿಣಾಮದ ಸಮಗ್ರ ಅಧ್ಯಯನ ಮಾಡುವ ಅಗತ್ಯವಿದೆ ಎಂಬುದನ್ನು ಇಲಾಖೆ ಮನಗಂಡಿದೆ.

ಯಾವುದೇ ಹೊಸ ಯೋಜನೆಗೆ ಬಿಡಿ ಬಿಡಿಯಾಗಿ (ಇಷ್ಟು ಕಿ.ಮೀ.ನಿಂದ ಇಂತಿಷ್ಟು ಕಿ.ಮೀ.ವರೆಗೆ) ಮರ ಕಡಿಯಲು ಅನುಮತಿ ನೀಡುವುದಕ್ಕೆ ಕಡಿವಾಣ ಹಾಕಿ, ಒಂದು ಯೋಜನೆಗೆ ಒಟ್ಟಾರೆ ಒಂದೇ ಬಾರಿ ಅನುಮತಿ ನೀಡಿ, ಪರ್ಯಾಯ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲೂ ಚಿಂತಿಸಲಾಗುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ವನಮಹೋತ್ಸವದ ವೇಳೆ ಗಿಡಗಳು ಆಳವಾಗಿ ಭೂಮಿಯಲ್ಲಿ ಬೇರು ಬಿಡುವಂತೆ ವೈಜ್ಞಾನಿಕವಾಗಿ ಸಸಿ ನೆಡುವಂತೆ ಸೂಚಿಸಲಾಗುವುದು. ಇದರಿಂದ ಬದುಕಿ ಉಳಿಯುವ ಸಸಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ ಎಂದರು.

ಬೀದರ್ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಸಾಗರ್ ಈಶ್ವರ ಖಂಡ್ರೆ, ಭಾಲ್ಕಿ ಹಿರೇಮಠದ ಡಾ. ಶ್ರೀ ಬಸವಲಿಂಗ ಪಟ್ಟದ್ದೇವರು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

5 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago