ಕುಂಬಕರ್ಣ ನಿದ್ರೆಯಿಂದ ಎಚ್ಚರಗೊಂಡು ಸಮಸ್ಯೆಗಳಿಗೆ ಸ್ಪಂದಿಸುವಂತೆ ಕುಂಬಕರ್ಣ ವೇಷದಲ್ಲಿ ತೆರಳಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಗೆ ಮನವಿ

ದೊಡ್ಡಬಳ್ಳಾಪುರ: ಎರಡು ವರ್ಷಗಳಿಂದ ತಾಲ್ಲೂಕು ಮಟ್ಟದಿಂದ ಜಿಲ್ಲಾಧಿಕಾರಿಗಳವರೆಗೆ ಮನವಿ ನೀಡಿದರು, ಹತ್ತಾರು ಬಾರಿ ಕಚೇರಿಗೆ ಅಲೆದಾಡಿದರು ಸಹ ಮಾಲಿನ್ಯ ನಿಯಂತ್ರಣ ಮಂಡಲಿ ಕಚೇರಿ ಬೆಂಗಳೂರಿನಿಂದ ತಾಲ್ಲೂಕಿಗೆ ಸ್ಥಳಾಂತರ ಆಗದೇ ಇರುವುದು, ಶಾಲಾ ಆವರಣದ ಸಮೀಪವೇ ತಂಬಾಕು ಮಾರಾಟ ನಡೆಯುತ್ತಿದ್ದರು ನಿಯಂತ್ರಿಸದೇ ಇರುವುದು, ನಗರಸಭೆ ವತಿಯಿಂದ ಘನತ್ಯಾಜ್ಯ, ದ್ರವತ್ಯಾಜ್ಯ ನಿರ್ವಹಣೆ ಸರಿಯಾಗಿ ಮಾಡದೇ ಇರುವುದು, ನ್ಯಾಯಬೆಲೆ ಅಂಗಡಿಗಳನ್ನು ತಿಂಗಳು ಪೂರ ತೆರೆಯದೆ ಇರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಿಲ್ಲಾ ಆಡಳಿತ ಕುಂಬಕರ್ಣ ನಿದ್ರೆಯಲ್ಲಿ ಇದೆ ಎಂದು ಆರೋಪಿಸಿ ನಮ್ಮ ಮನವಿಗಳಿಗೆ ಹೊಸ ವರ್ಷದಲ್ಲಾದರು ಜಿಲ್ಲಾ ಆಡಳಿತ ನಿದ್ರೆಯಿಂದ ಎಚ್ಚರಗೊಂಡು ಪರಿಹಾರ ಸೂಚುಸುವಂತೆ ಎಚ್ಚರಿಸಲು ಹಾಗೂ ಶುಭಾಶಯ ಕೋರಿ ಯುವ ಸಂಚಲನ ತಂಡದ ಸದಸ್ಯರು ಕುಂಬಕರ್ಣ ವೇಷದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾಧಿಕಾರಿ ಎನ್. ಶಿವಶಂಕರ್ ಅವರಿಗೆ ಮನವಿ ಸಲ್ಲಿಸಿದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

4 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

4 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

4 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

5 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

6 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

10 hours ago