Categories: ಕೋಲಾರ

ಕುಂಬಾರ ಸಮುದಾಯದ ಸಮಸ್ಯೆಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳು: ಅಧಿಕಾರಿಗಳೇ ಗೈರು: ಡಾ ಕೆ.ನಾಗರಾಜ್ ಆಕ್ರೋಶ

ಕೋಲಾರ: ಕುಂಬಾರ ಸಮುದಾಯದವರ ಸಮಸ್ಯೆ, ಕುಂದುಕೊರತೆಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೇ ಗೈರುಹಾಜರಿಯಾಗಿದ್ದು, ಸರ್ವಜ್ಞ ಜಯಂತಿಯಂದು ಪ್ರತಿ ಬಾರಿಯೂ ಕಡೆಗಣಿಸಿಕೊಂಡು ಬಂದಿದ್ದಾರೆ ಎಂದು ದಕ್ಷಿಣ ಭಾರತ ಕುಂಬಾರ ಫೆಡರೇಶನ್ ರಾಜ್ಯ ಯವ ಘಟಕದ ಅಧ್ಯಕ್ಷ ಡಾ.ಕೆ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕುಂಬಾರ ಸಮುದಾಯದ ವತಿಯಿಂದ ಆಯೋಜಿಸಿದ್ದ ಸಂತಕವಿ ಶ್ರೀ ಸರ್ವಜ್ಞ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕುಂಬಾರ ಸಮುದಾಯವು ಸಣ್ಣ ಸಮುದಾಯ ಎಂದು ನಿರ್ಲಕ್ಷ್ಯ ತೋರಿದ್ದಾರೆ. ಮುಂದೆ ಸಮುದಾಯವು ಒಗ್ಗಟ್ಟುನ್ನು ಪ್ರದರ್ಶಿಸಬೇಕು ಇಲ್ಲದೇ ಹೋದರೆ ನಿರಂತರವಾಗಿ ಕಡೆಗಣಿಸುತ್ತಾರೆ‌. ನಮ್ಮಲ್ಲಿ ಹೆಸರಿಗಷ್ಟೆ ಕುಂಬಾರ ನಿಗಮ ಮಂಡಳಿ ರಚನೆಯಾಗಿದೆ ಅದಕ್ಕೆ ಬಜೆಟ್ ನಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಇದೇ ರೀತಿ ಮುಂದುವರೆದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಸಮುದಾಯದ ಶಿಕ್ಷಣ, ಉದ್ಯೋಗಕ್ಕಾಗಿ ಈಗಿರುವ ಮೀಸಲಾತಿಯಲ್ಲಿಯೇ ಒಳ ಮೀಸಲಾತಿ ಜಾರಿ ಮಾಡಬೇಕು ಮಕ್ಕಳ ಶೈಕ್ಷಣಿಕವಾಗಿ ಮುಂದುವರೆಯಲು ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಪ್ರತಿ ತಾಲೂಕಿನಲ್ಲಿ ಸರ್ವಜ್ಞರ ಸಮುದಾಯ ಭವನ ನಿರ್ಮಾಣ ಮಾಡಬೇಕು ನಮ್ಮನ್ನು ಚುನಾವಣೆಗೆ ಮಾತ್ರ ಜನಪ್ರತಿನಿಧಿಗಳು ಬಳಸಿಕೊಂಡಿದ್ದು, ಮುಂಬರುವ ಚುನಾವಣೆಯಲ್ಲಿ ಮತಯಾಚನೆಗೆ ಬಂದಾಗ ತಕ್ಕಪಾಠ ಕಲಿಸೋಣತ್ತೇವೆ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಗಳನ್ನು ಬಳಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕುಂಬಾರ ವಿಧ್ಯಾರ್ಥಿ ನಿಲಯದ ಅಧ್ಯಕ್ಷ ತಬಲ ನಾರಾಯಣಪ್ಪ ಮಾತನಾಡಿ ಕುಂಬಾರ ಸಮುದಾಯದವರನ್ನು ಕರೆದರು ಇಂತಹ ಕಾರ್ಯಕ್ರಮಗಳಿಗೆ ಬರೋದಿಲ್ಲ ಅದರಿಂದಲೇ ನಮ್ಮಂತಹ ಸಣ್ಣ ಸಮುದಾಯಗಳನ್ನು ಎಂಎಲ್ಎ ಎಂಎಲ್ಸಿ ಎಂಪಿಗಳು ನಿರ್ಲಕ್ಷ್ಯ ತೋರಿಸುತ್ತಾರೆ ಮುಂದೆ ನಮ್ಮಲ್ಲಿನ ಒಗ್ಗಟ್ಟು ನೋಡಿ ಬೇರೆ ಸಮುದಾಯಗಳಿಗೆ ಮಾದರಿಯಾಗಬೇಕು ಅರೀತಿಯಲ್ಲಿ ಸಂಘಟಿತರಾಗಬೇಕು ಮಕ್ಕಳಿಗೆ ವಿದ್ಯೆ ಮತ್ತು ಶಿಸ್ತು ಕಲಿಸಲು ಪೋಷಕರು ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿಚಂದ್ರ ಮಾತನಾಡಿ ಸಮಾಜದಲ್ಲಿ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಸರ್ವಜ್ಞ ಕವಿ ವಚನಗಳೇ ಸಾಕ್ಷಿಯಾಗಿವೆ ಕುಂಬಾರ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ವಿಶ್ವ ಕರ್ಮ ಯೋಜನೆಯನ್ನು ಪ್ರಾರಂಭಿಸಿದ್ದು ಇದರ ಸದುಪಯೋಗ ಪಡಿಸಿಕೊಂಡು ಸ್ವಂತ ಉದ್ಯೋಗದೊಂದಿಗೆ ನಾಲ್ಕು ಜನಕ್ಕೆ ಉದ್ಯೋಗ ಕೊಡಿಸುವ ಕೆಲಸವಾಗಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಕುವೆಂಪು ನಗರದಲ್ಲಿರುವ ವಸತಿ ನಿಲಯದಿಂದ ಮೆರವಣಿಗೆ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸರ್ವಜ್ಞರ ಭಾವಚಿತ್ರದ ಪಲ್ಲಕ್ಕಿಗಳು ಹಾಗೂ ಕಲಾತಂಡಗಳೊಂದಿಗೆ ರಂಗಮಂದಿರಕ್ಕೆ ಆಗಮಿಸಿದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಜವಳಿ ಮತ್ತು ಕೈಮಗ್ಗ ಇಲಾಖೆಯ ಮಂಜುನಾಥ್, ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಕಲ್ಲಂಡೂರು ಶ್ರೀನಿವಾಸಪ್ಪ, ಪದಾಧಿಕಾರಿಗಳಾದ ಶ್ರೀನಿವಾಸ್, ರೆಡ್ಡೆಪ್ಪ, ನಂದೀಶ್‌,ನಾರಾಯಣಸ್ವಾಮಿ, ಮಂಜುನಾಥ್ ಚಿಕ್ಕರೆಡ್ಡೆಪ್ಪ, ಕೃಷ್ಣಮೂರ್ತಿ, ಜ್ಞಾನ ಮೂರ್ತಿ ಮುಂತಾದವರು ಇದ್ದರು

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago