Categories: ಕೋಲಾರ

ಕುಂಬಾರ ಸಮುದಾಯದ ಸಮಸ್ಯೆಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳು: ಅಧಿಕಾರಿಗಳೇ ಗೈರು: ಡಾ ಕೆ.ನಾಗರಾಜ್ ಆಕ್ರೋಶ

ಕೋಲಾರ: ಕುಂಬಾರ ಸಮುದಾಯದವರ ಸಮಸ್ಯೆ, ಕುಂದುಕೊರತೆಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೇ ಗೈರುಹಾಜರಿಯಾಗಿದ್ದು, ಸರ್ವಜ್ಞ ಜಯಂತಿಯಂದು ಪ್ರತಿ ಬಾರಿಯೂ ಕಡೆಗಣಿಸಿಕೊಂಡು ಬಂದಿದ್ದಾರೆ ಎಂದು ದಕ್ಷಿಣ ಭಾರತ ಕುಂಬಾರ ಫೆಡರೇಶನ್ ರಾಜ್ಯ ಯವ ಘಟಕದ ಅಧ್ಯಕ್ಷ ಡಾ.ಕೆ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕುಂಬಾರ ಸಮುದಾಯದ ವತಿಯಿಂದ ಆಯೋಜಿಸಿದ್ದ ಸಂತಕವಿ ಶ್ರೀ ಸರ್ವಜ್ಞ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕುಂಬಾರ ಸಮುದಾಯವು ಸಣ್ಣ ಸಮುದಾಯ ಎಂದು ನಿರ್ಲಕ್ಷ್ಯ ತೋರಿದ್ದಾರೆ. ಮುಂದೆ ಸಮುದಾಯವು ಒಗ್ಗಟ್ಟುನ್ನು ಪ್ರದರ್ಶಿಸಬೇಕು ಇಲ್ಲದೇ ಹೋದರೆ ನಿರಂತರವಾಗಿ ಕಡೆಗಣಿಸುತ್ತಾರೆ‌. ನಮ್ಮಲ್ಲಿ ಹೆಸರಿಗಷ್ಟೆ ಕುಂಬಾರ ನಿಗಮ ಮಂಡಳಿ ರಚನೆಯಾಗಿದೆ ಅದಕ್ಕೆ ಬಜೆಟ್ ನಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಇದೇ ರೀತಿ ಮುಂದುವರೆದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಸಮುದಾಯದ ಶಿಕ್ಷಣ, ಉದ್ಯೋಗಕ್ಕಾಗಿ ಈಗಿರುವ ಮೀಸಲಾತಿಯಲ್ಲಿಯೇ ಒಳ ಮೀಸಲಾತಿ ಜಾರಿ ಮಾಡಬೇಕು ಮಕ್ಕಳ ಶೈಕ್ಷಣಿಕವಾಗಿ ಮುಂದುವರೆಯಲು ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಪ್ರತಿ ತಾಲೂಕಿನಲ್ಲಿ ಸರ್ವಜ್ಞರ ಸಮುದಾಯ ಭವನ ನಿರ್ಮಾಣ ಮಾಡಬೇಕು ನಮ್ಮನ್ನು ಚುನಾವಣೆಗೆ ಮಾತ್ರ ಜನಪ್ರತಿನಿಧಿಗಳು ಬಳಸಿಕೊಂಡಿದ್ದು, ಮುಂಬರುವ ಚುನಾವಣೆಯಲ್ಲಿ ಮತಯಾಚನೆಗೆ ಬಂದಾಗ ತಕ್ಕಪಾಠ ಕಲಿಸೋಣತ್ತೇವೆ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಗಳನ್ನು ಬಳಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕುಂಬಾರ ವಿಧ್ಯಾರ್ಥಿ ನಿಲಯದ ಅಧ್ಯಕ್ಷ ತಬಲ ನಾರಾಯಣಪ್ಪ ಮಾತನಾಡಿ ಕುಂಬಾರ ಸಮುದಾಯದವರನ್ನು ಕರೆದರು ಇಂತಹ ಕಾರ್ಯಕ್ರಮಗಳಿಗೆ ಬರೋದಿಲ್ಲ ಅದರಿಂದಲೇ ನಮ್ಮಂತಹ ಸಣ್ಣ ಸಮುದಾಯಗಳನ್ನು ಎಂಎಲ್ಎ ಎಂಎಲ್ಸಿ ಎಂಪಿಗಳು ನಿರ್ಲಕ್ಷ್ಯ ತೋರಿಸುತ್ತಾರೆ ಮುಂದೆ ನಮ್ಮಲ್ಲಿನ ಒಗ್ಗಟ್ಟು ನೋಡಿ ಬೇರೆ ಸಮುದಾಯಗಳಿಗೆ ಮಾದರಿಯಾಗಬೇಕು ಅರೀತಿಯಲ್ಲಿ ಸಂಘಟಿತರಾಗಬೇಕು ಮಕ್ಕಳಿಗೆ ವಿದ್ಯೆ ಮತ್ತು ಶಿಸ್ತು ಕಲಿಸಲು ಪೋಷಕರು ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿಚಂದ್ರ ಮಾತನಾಡಿ ಸಮಾಜದಲ್ಲಿ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಸರ್ವಜ್ಞ ಕವಿ ವಚನಗಳೇ ಸಾಕ್ಷಿಯಾಗಿವೆ ಕುಂಬಾರ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ವಿಶ್ವ ಕರ್ಮ ಯೋಜನೆಯನ್ನು ಪ್ರಾರಂಭಿಸಿದ್ದು ಇದರ ಸದುಪಯೋಗ ಪಡಿಸಿಕೊಂಡು ಸ್ವಂತ ಉದ್ಯೋಗದೊಂದಿಗೆ ನಾಲ್ಕು ಜನಕ್ಕೆ ಉದ್ಯೋಗ ಕೊಡಿಸುವ ಕೆಲಸವಾಗಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಕುವೆಂಪು ನಗರದಲ್ಲಿರುವ ವಸತಿ ನಿಲಯದಿಂದ ಮೆರವಣಿಗೆ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸರ್ವಜ್ಞರ ಭಾವಚಿತ್ರದ ಪಲ್ಲಕ್ಕಿಗಳು ಹಾಗೂ ಕಲಾತಂಡಗಳೊಂದಿಗೆ ರಂಗಮಂದಿರಕ್ಕೆ ಆಗಮಿಸಿದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಜವಳಿ ಮತ್ತು ಕೈಮಗ್ಗ ಇಲಾಖೆಯ ಮಂಜುನಾಥ್, ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಕಲ್ಲಂಡೂರು ಶ್ರೀನಿವಾಸಪ್ಪ, ಪದಾಧಿಕಾರಿಗಳಾದ ಶ್ರೀನಿವಾಸ್, ರೆಡ್ಡೆಪ್ಪ, ನಂದೀಶ್‌,ನಾರಾಯಣಸ್ವಾಮಿ, ಮಂಜುನಾಥ್ ಚಿಕ್ಕರೆಡ್ಡೆಪ್ಪ, ಕೃಷ್ಣಮೂರ್ತಿ, ಜ್ಞಾನ ಮೂರ್ತಿ ಮುಂತಾದವರು ಇದ್ದರು

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

8 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

10 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

10 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

11 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

15 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

16 hours ago