Categories: ಕೋಲಾರ

ಕುಂಬಾರ ಸಮುದಾಯದ ಸಮಸ್ಯೆಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳು: ಅಧಿಕಾರಿಗಳೇ ಗೈರು: ಡಾ ಕೆ.ನಾಗರಾಜ್ ಆಕ್ರೋಶ

ಕೋಲಾರ: ಕುಂಬಾರ ಸಮುದಾಯದವರ ಸಮಸ್ಯೆ, ಕುಂದುಕೊರತೆಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೇ ಗೈರುಹಾಜರಿಯಾಗಿದ್ದು, ಸರ್ವಜ್ಞ ಜಯಂತಿಯಂದು ಪ್ರತಿ ಬಾರಿಯೂ ಕಡೆಗಣಿಸಿಕೊಂಡು ಬಂದಿದ್ದಾರೆ ಎಂದು ದಕ್ಷಿಣ ಭಾರತ ಕುಂಬಾರ ಫೆಡರೇಶನ್ ರಾಜ್ಯ ಯವ ಘಟಕದ ಅಧ್ಯಕ್ಷ ಡಾ.ಕೆ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕುಂಬಾರ ಸಮುದಾಯದ ವತಿಯಿಂದ ಆಯೋಜಿಸಿದ್ದ ಸಂತಕವಿ ಶ್ರೀ ಸರ್ವಜ್ಞ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕುಂಬಾರ ಸಮುದಾಯವು ಸಣ್ಣ ಸಮುದಾಯ ಎಂದು ನಿರ್ಲಕ್ಷ್ಯ ತೋರಿದ್ದಾರೆ. ಮುಂದೆ ಸಮುದಾಯವು ಒಗ್ಗಟ್ಟುನ್ನು ಪ್ರದರ್ಶಿಸಬೇಕು ಇಲ್ಲದೇ ಹೋದರೆ ನಿರಂತರವಾಗಿ ಕಡೆಗಣಿಸುತ್ತಾರೆ‌. ನಮ್ಮಲ್ಲಿ ಹೆಸರಿಗಷ್ಟೆ ಕುಂಬಾರ ನಿಗಮ ಮಂಡಳಿ ರಚನೆಯಾಗಿದೆ ಅದಕ್ಕೆ ಬಜೆಟ್ ನಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಇದೇ ರೀತಿ ಮುಂದುವರೆದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಸಮುದಾಯದ ಶಿಕ್ಷಣ, ಉದ್ಯೋಗಕ್ಕಾಗಿ ಈಗಿರುವ ಮೀಸಲಾತಿಯಲ್ಲಿಯೇ ಒಳ ಮೀಸಲಾತಿ ಜಾರಿ ಮಾಡಬೇಕು ಮಕ್ಕಳ ಶೈಕ್ಷಣಿಕವಾಗಿ ಮುಂದುವರೆಯಲು ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಪ್ರತಿ ತಾಲೂಕಿನಲ್ಲಿ ಸರ್ವಜ್ಞರ ಸಮುದಾಯ ಭವನ ನಿರ್ಮಾಣ ಮಾಡಬೇಕು ನಮ್ಮನ್ನು ಚುನಾವಣೆಗೆ ಮಾತ್ರ ಜನಪ್ರತಿನಿಧಿಗಳು ಬಳಸಿಕೊಂಡಿದ್ದು, ಮುಂಬರುವ ಚುನಾವಣೆಯಲ್ಲಿ ಮತಯಾಚನೆಗೆ ಬಂದಾಗ ತಕ್ಕಪಾಠ ಕಲಿಸೋಣತ್ತೇವೆ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಗಳನ್ನು ಬಳಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕುಂಬಾರ ವಿಧ್ಯಾರ್ಥಿ ನಿಲಯದ ಅಧ್ಯಕ್ಷ ತಬಲ ನಾರಾಯಣಪ್ಪ ಮಾತನಾಡಿ ಕುಂಬಾರ ಸಮುದಾಯದವರನ್ನು ಕರೆದರು ಇಂತಹ ಕಾರ್ಯಕ್ರಮಗಳಿಗೆ ಬರೋದಿಲ್ಲ ಅದರಿಂದಲೇ ನಮ್ಮಂತಹ ಸಣ್ಣ ಸಮುದಾಯಗಳನ್ನು ಎಂಎಲ್ಎ ಎಂಎಲ್ಸಿ ಎಂಪಿಗಳು ನಿರ್ಲಕ್ಷ್ಯ ತೋರಿಸುತ್ತಾರೆ ಮುಂದೆ ನಮ್ಮಲ್ಲಿನ ಒಗ್ಗಟ್ಟು ನೋಡಿ ಬೇರೆ ಸಮುದಾಯಗಳಿಗೆ ಮಾದರಿಯಾಗಬೇಕು ಅರೀತಿಯಲ್ಲಿ ಸಂಘಟಿತರಾಗಬೇಕು ಮಕ್ಕಳಿಗೆ ವಿದ್ಯೆ ಮತ್ತು ಶಿಸ್ತು ಕಲಿಸಲು ಪೋಷಕರು ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿಚಂದ್ರ ಮಾತನಾಡಿ ಸಮಾಜದಲ್ಲಿ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಸರ್ವಜ್ಞ ಕವಿ ವಚನಗಳೇ ಸಾಕ್ಷಿಯಾಗಿವೆ ಕುಂಬಾರ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ವಿಶ್ವ ಕರ್ಮ ಯೋಜನೆಯನ್ನು ಪ್ರಾರಂಭಿಸಿದ್ದು ಇದರ ಸದುಪಯೋಗ ಪಡಿಸಿಕೊಂಡು ಸ್ವಂತ ಉದ್ಯೋಗದೊಂದಿಗೆ ನಾಲ್ಕು ಜನಕ್ಕೆ ಉದ್ಯೋಗ ಕೊಡಿಸುವ ಕೆಲಸವಾಗಬೇಕು ಎಂದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಕುವೆಂಪು ನಗರದಲ್ಲಿರುವ ವಸತಿ ನಿಲಯದಿಂದ ಮೆರವಣಿಗೆ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸರ್ವಜ್ಞರ ಭಾವಚಿತ್ರದ ಪಲ್ಲಕ್ಕಿಗಳು ಹಾಗೂ ಕಲಾತಂಡಗಳೊಂದಿಗೆ ರಂಗಮಂದಿರಕ್ಕೆ ಆಗಮಿಸಿದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಜವಳಿ ಮತ್ತು ಕೈಮಗ್ಗ ಇಲಾಖೆಯ ಮಂಜುನಾಥ್, ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಕಲ್ಲಂಡೂರು ಶ್ರೀನಿವಾಸಪ್ಪ, ಪದಾಧಿಕಾರಿಗಳಾದ ಶ್ರೀನಿವಾಸ್, ರೆಡ್ಡೆಪ್ಪ, ನಂದೀಶ್‌,ನಾರಾಯಣಸ್ವಾಮಿ, ಮಂಜುನಾಥ್ ಚಿಕ್ಕರೆಡ್ಡೆಪ್ಪ, ಕೃಷ್ಣಮೂರ್ತಿ, ಜ್ಞಾನ ಮೂರ್ತಿ ಮುಂತಾದವರು ಇದ್ದರು

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

5 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

16 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

17 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

17 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

19 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

23 hours ago