ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಿಂಗರಿಸಿದ ದೊಡ್ಡಬಳ್ಳಾಪುರ ಯುವಕರ ತಂಡ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ಅದ್ಧೂರಿ ಬ್ರಹ್ಮರಥೋತ್ಸವ ನಡೆಯಿತು, ಹೂವಿನಿಂದ ಅಲಂಕೃತಗೊಂಡ ಬ್ರಹ್ಮರಥೋತ್ಸವದ ಸೌಂದರ್ಯವನ್ನ ಭಕ್ತರು ಕಣ್ತುಂಬಿ ಕೊಂಡರು. ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸಿದ್ದು ದೊಡ್ಡಬಳ್ಳಾಪುರದ ಯುವಕರ ತಂಡ.

ದೊಡ್ಡಬಳ್ಳಾಪುರ ತಾಲೂಕು ಕಸವನಹಳ್ಳಿಯ ಅಂಬರೀಷ್ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವನ್ನ ಹೂವಿನಿಂದ ಅಲಂಕಾರ ಮಾಡುವ ಅವಕಾಶವನ್ನ ಪಡೆದಿದ್ದಾರೆ. ಮದುವೆ ಸಮಾರಂಭಗಳಿಗೆ ಮಾತ್ರ ಹೂವಿನ ಅಲಂಕಾರ ಮಾಡಿದ ಅನುಭವ ಅಂಬರೀಷ್ ತಂಡಕ್ಕೆ ಇತ್ತು, ಧಾರ್ಮಿಕ ಕಾರ್ಯಗಳಿಗೆ ಯಾವತ್ತು ಹೂವಿನ ಅಲಂಕಾರ ಮಾಡಿರಲಿಲ್ಲ. ಆದರೂ, ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಮತ್ತು ಬ್ರಹ್ಮರಥೋತ್ಸವವನ್ನು ಹೂವಿನ ಅಲಂಕಾರ ಮಾಡುವ ತೀರ್ಮಾನ ಮಾಡಿ, ಹೂವಿನ ಅಲಂಕಾರದ ಆಸೆಯನ್ನು ದೇವಸ್ಥಾನ ಆಡಳಿತ ಮಂಡಳಿಯ ಮುಂದಿಟ್ಟರು, ಕಳೆದ ವರ್ಷ ಅಂಬರೀಷ್ ರವರಿಗೆ ಬ್ರಹ್ಮರಥೋತ್ಸವದ ಅರ್ಧ ಭಾಗದ ಅಲಂಕಾರ ಮಾಡುವ ಅವಕಾಶವನ್ನ ಆಡಳಿತ ನೀಡಿತ್ತು, ಸಿಕ್ಕ ಅವಕಾಶವನ್ನ ಸಮರ್ಥವಾಗಿ ನಿರ್ವಹಿಸಿದ ಅಂಬರೀಶ್ ಮತ್ತು ಅವರ ತಂಡ ಸೈ ಎನಿಸಿಕೊಂಡಿದೆ.

ನವೆಂಬರ್ 29, ಚಂಪಾಷಷ್ಠಿಯಂದು ನಡೆದ ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸುವ ಸಂಪೂರ್ಣ ಜವಾಬ್ದಾರಿ ಅಂಬರೀಷ್ ಪಾಲಿಗೆ ಬಂದಿತು, 50 ಯುವಕ ತಂಡದೊಂದಿಗೆ ಹೂವಿನ ಅಲಂಕಾರ ಪ್ರಾರಂಭಿಸಿದರು. ಚಿಕ್ಕಬಳ್ಳಾಪುರ ಭಾಗದಲ್ಲಿ ಬೆಳೆಯಲಾದ ಸೇವಂತಿಗೆ, ಗುಲಾಬಿ, ಜರ್ಬೆರಾ, ಚೆಂಡು ಹೂ , ಸುಗಂಧರಾಜ ಹೂವನ್ನು ಸೇದಿದಂತೆ ಒಟ್ಟು 15 ಬಗೆಯ ಹೂಗಳನ್ನು ಅಲಂಕಾರಕ್ಕೆ ಬಳಸಿದ್ದಾರೆ, ದೊಡ್ಡಬಳ್ಳಾಪುರ ಯುವಕರ ತಂಡ ಮಾಡಿದ ಹೂವಿನ ಅಲಂಕಾರಕ್ಕೆ ಮೆಚ್ಚಿಗೆ ಸಹ ವ್ಯಕ್ತವಾಗಿದೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

9 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

10 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

10 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

10 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

12 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

14 hours ago