ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಿಂಗರಿಸಿದ ದೊಡ್ಡಬಳ್ಳಾಪುರ ಯುವಕರ ತಂಡ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ಅದ್ಧೂರಿ ಬ್ರಹ್ಮರಥೋತ್ಸವ ನಡೆಯಿತು, ಹೂವಿನಿಂದ ಅಲಂಕೃತಗೊಂಡ ಬ್ರಹ್ಮರಥೋತ್ಸವದ ಸೌಂದರ್ಯವನ್ನ ಭಕ್ತರು ಕಣ್ತುಂಬಿ ಕೊಂಡರು. ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸಿದ್ದು ದೊಡ್ಡಬಳ್ಳಾಪುರದ ಯುವಕರ ತಂಡ.

ದೊಡ್ಡಬಳ್ಳಾಪುರ ತಾಲೂಕು ಕಸವನಹಳ್ಳಿಯ ಅಂಬರೀಷ್ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವನ್ನ ಹೂವಿನಿಂದ ಅಲಂಕಾರ ಮಾಡುವ ಅವಕಾಶವನ್ನ ಪಡೆದಿದ್ದಾರೆ. ಮದುವೆ ಸಮಾರಂಭಗಳಿಗೆ ಮಾತ್ರ ಹೂವಿನ ಅಲಂಕಾರ ಮಾಡಿದ ಅನುಭವ ಅಂಬರೀಷ್ ತಂಡಕ್ಕೆ ಇತ್ತು, ಧಾರ್ಮಿಕ ಕಾರ್ಯಗಳಿಗೆ ಯಾವತ್ತು ಹೂವಿನ ಅಲಂಕಾರ ಮಾಡಿರಲಿಲ್ಲ. ಆದರೂ, ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಮತ್ತು ಬ್ರಹ್ಮರಥೋತ್ಸವವನ್ನು ಹೂವಿನ ಅಲಂಕಾರ ಮಾಡುವ ತೀರ್ಮಾನ ಮಾಡಿ, ಹೂವಿನ ಅಲಂಕಾರದ ಆಸೆಯನ್ನು ದೇವಸ್ಥಾನ ಆಡಳಿತ ಮಂಡಳಿಯ ಮುಂದಿಟ್ಟರು, ಕಳೆದ ವರ್ಷ ಅಂಬರೀಷ್ ರವರಿಗೆ ಬ್ರಹ್ಮರಥೋತ್ಸವದ ಅರ್ಧ ಭಾಗದ ಅಲಂಕಾರ ಮಾಡುವ ಅವಕಾಶವನ್ನ ಆಡಳಿತ ನೀಡಿತ್ತು, ಸಿಕ್ಕ ಅವಕಾಶವನ್ನ ಸಮರ್ಥವಾಗಿ ನಿರ್ವಹಿಸಿದ ಅಂಬರೀಶ್ ಮತ್ತು ಅವರ ತಂಡ ಸೈ ಎನಿಸಿಕೊಂಡಿದೆ.

ನವೆಂಬರ್ 29, ಚಂಪಾಷಷ್ಠಿಯಂದು ನಡೆದ ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸುವ ಸಂಪೂರ್ಣ ಜವಾಬ್ದಾರಿ ಅಂಬರೀಷ್ ಪಾಲಿಗೆ ಬಂದಿತು, 50 ಯುವಕ ತಂಡದೊಂದಿಗೆ ಹೂವಿನ ಅಲಂಕಾರ ಪ್ರಾರಂಭಿಸಿದರು. ಚಿಕ್ಕಬಳ್ಳಾಪುರ ಭಾಗದಲ್ಲಿ ಬೆಳೆಯಲಾದ ಸೇವಂತಿಗೆ, ಗುಲಾಬಿ, ಜರ್ಬೆರಾ, ಚೆಂಡು ಹೂ , ಸುಗಂಧರಾಜ ಹೂವನ್ನು ಸೇದಿದಂತೆ ಒಟ್ಟು 15 ಬಗೆಯ ಹೂಗಳನ್ನು ಅಲಂಕಾರಕ್ಕೆ ಬಳಸಿದ್ದಾರೆ, ದೊಡ್ಡಬಳ್ಳಾಪುರ ಯುವಕರ ತಂಡ ಮಾಡಿದ ಹೂವಿನ ಅಲಂಕಾರಕ್ಕೆ ಮೆಚ್ಚಿಗೆ ಸಹ ವ್ಯಕ್ತವಾಗಿದೆ.

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 hour ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

4 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

6 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

8 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

8 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

8 hours ago