ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಿಂಗರಿಸಿದ ದೊಡ್ಡಬಳ್ಳಾಪುರ ಯುವಕರ ತಂಡ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ಅದ್ಧೂರಿ ಬ್ರಹ್ಮರಥೋತ್ಸವ ನಡೆಯಿತು, ಹೂವಿನಿಂದ ಅಲಂಕೃತಗೊಂಡ ಬ್ರಹ್ಮರಥೋತ್ಸವದ ಸೌಂದರ್ಯವನ್ನ ಭಕ್ತರು ಕಣ್ತುಂಬಿ ಕೊಂಡರು. ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸಿದ್ದು ದೊಡ್ಡಬಳ್ಳಾಪುರದ ಯುವಕರ ತಂಡ.

ದೊಡ್ಡಬಳ್ಳಾಪುರ ತಾಲೂಕು ಕಸವನಹಳ್ಳಿಯ ಅಂಬರೀಷ್ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವನ್ನ ಹೂವಿನಿಂದ ಅಲಂಕಾರ ಮಾಡುವ ಅವಕಾಶವನ್ನ ಪಡೆದಿದ್ದಾರೆ. ಮದುವೆ ಸಮಾರಂಭಗಳಿಗೆ ಮಾತ್ರ ಹೂವಿನ ಅಲಂಕಾರ ಮಾಡಿದ ಅನುಭವ ಅಂಬರೀಷ್ ತಂಡಕ್ಕೆ ಇತ್ತು, ಧಾರ್ಮಿಕ ಕಾರ್ಯಗಳಿಗೆ ಯಾವತ್ತು ಹೂವಿನ ಅಲಂಕಾರ ಮಾಡಿರಲಿಲ್ಲ. ಆದರೂ, ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಮತ್ತು ಬ್ರಹ್ಮರಥೋತ್ಸವವನ್ನು ಹೂವಿನ ಅಲಂಕಾರ ಮಾಡುವ ತೀರ್ಮಾನ ಮಾಡಿ, ಹೂವಿನ ಅಲಂಕಾರದ ಆಸೆಯನ್ನು ದೇವಸ್ಥಾನ ಆಡಳಿತ ಮಂಡಳಿಯ ಮುಂದಿಟ್ಟರು, ಕಳೆದ ವರ್ಷ ಅಂಬರೀಷ್ ರವರಿಗೆ ಬ್ರಹ್ಮರಥೋತ್ಸವದ ಅರ್ಧ ಭಾಗದ ಅಲಂಕಾರ ಮಾಡುವ ಅವಕಾಶವನ್ನ ಆಡಳಿತ ನೀಡಿತ್ತು, ಸಿಕ್ಕ ಅವಕಾಶವನ್ನ ಸಮರ್ಥವಾಗಿ ನಿರ್ವಹಿಸಿದ ಅಂಬರೀಶ್ ಮತ್ತು ಅವರ ತಂಡ ಸೈ ಎನಿಸಿಕೊಂಡಿದೆ.

ನವೆಂಬರ್ 29, ಚಂಪಾಷಷ್ಠಿಯಂದು ನಡೆದ ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸುವ ಸಂಪೂರ್ಣ ಜವಾಬ್ದಾರಿ ಅಂಬರೀಷ್ ಪಾಲಿಗೆ ಬಂದಿತು, 50 ಯುವಕ ತಂಡದೊಂದಿಗೆ ಹೂವಿನ ಅಲಂಕಾರ ಪ್ರಾರಂಭಿಸಿದರು. ಚಿಕ್ಕಬಳ್ಳಾಪುರ ಭಾಗದಲ್ಲಿ ಬೆಳೆಯಲಾದ ಸೇವಂತಿಗೆ, ಗುಲಾಬಿ, ಜರ್ಬೆರಾ, ಚೆಂಡು ಹೂ , ಸುಗಂಧರಾಜ ಹೂವನ್ನು ಸೇದಿದಂತೆ ಒಟ್ಟು 15 ಬಗೆಯ ಹೂಗಳನ್ನು ಅಲಂಕಾರಕ್ಕೆ ಬಳಸಿದ್ದಾರೆ, ದೊಡ್ಡಬಳ್ಳಾಪುರ ಯುವಕರ ತಂಡ ಮಾಡಿದ ಹೂವಿನ ಅಲಂಕಾರಕ್ಕೆ ಮೆಚ್ಚಿಗೆ ಸಹ ವ್ಯಕ್ತವಾಗಿದೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

14 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

21 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

24 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago