ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ಅದ್ಧೂರಿ ಬ್ರಹ್ಮರಥೋತ್ಸವ ನಡೆಯಿತು, ಹೂವಿನಿಂದ ಅಲಂಕೃತಗೊಂಡ ಬ್ರಹ್ಮರಥೋತ್ಸವದ ಸೌಂದರ್ಯವನ್ನ ಭಕ್ತರು ಕಣ್ತುಂಬಿ ಕೊಂಡರು. ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸಿದ್ದು ದೊಡ್ಡಬಳ್ಳಾಪುರದ ಯುವಕರ ತಂಡ.
ದೊಡ್ಡಬಳ್ಳಾಪುರ ತಾಲೂಕು ಕಸವನಹಳ್ಳಿಯ ಅಂಬರೀಷ್ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವನ್ನ ಹೂವಿನಿಂದ ಅಲಂಕಾರ ಮಾಡುವ ಅವಕಾಶವನ್ನ ಪಡೆದಿದ್ದಾರೆ. ಮದುವೆ ಸಮಾರಂಭಗಳಿಗೆ ಮಾತ್ರ ಹೂವಿನ ಅಲಂಕಾರ ಮಾಡಿದ ಅನುಭವ ಅಂಬರೀಷ್ ತಂಡಕ್ಕೆ ಇತ್ತು, ಧಾರ್ಮಿಕ ಕಾರ್ಯಗಳಿಗೆ ಯಾವತ್ತು ಹೂವಿನ ಅಲಂಕಾರ ಮಾಡಿರಲಿಲ್ಲ. ಆದರೂ, ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಮತ್ತು ಬ್ರಹ್ಮರಥೋತ್ಸವವನ್ನು ಹೂವಿನ ಅಲಂಕಾರ ಮಾಡುವ ತೀರ್ಮಾನ ಮಾಡಿ, ಹೂವಿನ ಅಲಂಕಾರದ ಆಸೆಯನ್ನು ದೇವಸ್ಥಾನ ಆಡಳಿತ ಮಂಡಳಿಯ ಮುಂದಿಟ್ಟರು, ಕಳೆದ ವರ್ಷ ಅಂಬರೀಷ್ ರವರಿಗೆ ಬ್ರಹ್ಮರಥೋತ್ಸವದ ಅರ್ಧ ಭಾಗದ ಅಲಂಕಾರ ಮಾಡುವ ಅವಕಾಶವನ್ನ ಆಡಳಿತ ನೀಡಿತ್ತು, ಸಿಕ್ಕ ಅವಕಾಶವನ್ನ ಸಮರ್ಥವಾಗಿ ನಿರ್ವಹಿಸಿದ ಅಂಬರೀಶ್ ಮತ್ತು ಅವರ ತಂಡ ಸೈ ಎನಿಸಿಕೊಂಡಿದೆ.
ನವೆಂಬರ್ 29, ಚಂಪಾಷಷ್ಠಿಯಂದು ನಡೆದ ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸುವ ಸಂಪೂರ್ಣ ಜವಾಬ್ದಾರಿ ಅಂಬರೀಷ್ ಪಾಲಿಗೆ ಬಂದಿತು, 50 ಯುವಕ ತಂಡದೊಂದಿಗೆ ಹೂವಿನ ಅಲಂಕಾರ ಪ್ರಾರಂಭಿಸಿದರು. ಚಿಕ್ಕಬಳ್ಳಾಪುರ ಭಾಗದಲ್ಲಿ ಬೆಳೆಯಲಾದ ಸೇವಂತಿಗೆ, ಗುಲಾಬಿ, ಜರ್ಬೆರಾ, ಚೆಂಡು ಹೂ , ಸುಗಂಧರಾಜ ಹೂವನ್ನು ಸೇದಿದಂತೆ ಒಟ್ಟು 15 ಬಗೆಯ ಹೂಗಳನ್ನು ಅಲಂಕಾರಕ್ಕೆ ಬಳಸಿದ್ದಾರೆ, ದೊಡ್ಡಬಳ್ಳಾಪುರ ಯುವಕರ ತಂಡ ಮಾಡಿದ ಹೂವಿನ ಅಲಂಕಾರಕ್ಕೆ ಮೆಚ್ಚಿಗೆ ಸಹ ವ್ಯಕ್ತವಾಗಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…