ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ಅದ್ಧೂರಿ ಬ್ರಹ್ಮರಥೋತ್ಸವ ನಡೆಯಿತು, ಹೂವಿನಿಂದ ಅಲಂಕೃತಗೊಂಡ ಬ್ರಹ್ಮರಥೋತ್ಸವದ ಸೌಂದರ್ಯವನ್ನ ಭಕ್ತರು ಕಣ್ತುಂಬಿ ಕೊಂಡರು. ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸಿದ್ದು ದೊಡ್ಡಬಳ್ಳಾಪುರದ ಯುವಕರ ತಂಡ.
ದೊಡ್ಡಬಳ್ಳಾಪುರ ತಾಲೂಕು ಕಸವನಹಳ್ಳಿಯ ಅಂಬರೀಷ್ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವನ್ನ ಹೂವಿನಿಂದ ಅಲಂಕಾರ ಮಾಡುವ ಅವಕಾಶವನ್ನ ಪಡೆದಿದ್ದಾರೆ. ಮದುವೆ ಸಮಾರಂಭಗಳಿಗೆ ಮಾತ್ರ ಹೂವಿನ ಅಲಂಕಾರ ಮಾಡಿದ ಅನುಭವ ಅಂಬರೀಷ್ ತಂಡಕ್ಕೆ ಇತ್ತು, ಧಾರ್ಮಿಕ ಕಾರ್ಯಗಳಿಗೆ ಯಾವತ್ತು ಹೂವಿನ ಅಲಂಕಾರ ಮಾಡಿರಲಿಲ್ಲ. ಆದರೂ, ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಮತ್ತು ಬ್ರಹ್ಮರಥೋತ್ಸವವನ್ನು ಹೂವಿನ ಅಲಂಕಾರ ಮಾಡುವ ತೀರ್ಮಾನ ಮಾಡಿ, ಹೂವಿನ ಅಲಂಕಾರದ ಆಸೆಯನ್ನು ದೇವಸ್ಥಾನ ಆಡಳಿತ ಮಂಡಳಿಯ ಮುಂದಿಟ್ಟರು, ಕಳೆದ ವರ್ಷ ಅಂಬರೀಷ್ ರವರಿಗೆ ಬ್ರಹ್ಮರಥೋತ್ಸವದ ಅರ್ಧ ಭಾಗದ ಅಲಂಕಾರ ಮಾಡುವ ಅವಕಾಶವನ್ನ ಆಡಳಿತ ನೀಡಿತ್ತು, ಸಿಕ್ಕ ಅವಕಾಶವನ್ನ ಸಮರ್ಥವಾಗಿ ನಿರ್ವಹಿಸಿದ ಅಂಬರೀಶ್ ಮತ್ತು ಅವರ ತಂಡ ಸೈ ಎನಿಸಿಕೊಂಡಿದೆ.
ನವೆಂಬರ್ 29, ಚಂಪಾಷಷ್ಠಿಯಂದು ನಡೆದ ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸುವ ಸಂಪೂರ್ಣ ಜವಾಬ್ದಾರಿ ಅಂಬರೀಷ್ ಪಾಲಿಗೆ ಬಂದಿತು, 50 ಯುವಕ ತಂಡದೊಂದಿಗೆ ಹೂವಿನ ಅಲಂಕಾರ ಪ್ರಾರಂಭಿಸಿದರು. ಚಿಕ್ಕಬಳ್ಳಾಪುರ ಭಾಗದಲ್ಲಿ ಬೆಳೆಯಲಾದ ಸೇವಂತಿಗೆ, ಗುಲಾಬಿ, ಜರ್ಬೆರಾ, ಚೆಂಡು ಹೂ , ಸುಗಂಧರಾಜ ಹೂವನ್ನು ಸೇದಿದಂತೆ ಒಟ್ಟು 15 ಬಗೆಯ ಹೂಗಳನ್ನು ಅಲಂಕಾರಕ್ಕೆ ಬಳಸಿದ್ದಾರೆ, ದೊಡ್ಡಬಳ್ಳಾಪುರ ಯುವಕರ ತಂಡ ಮಾಡಿದ ಹೂವಿನ ಅಲಂಕಾರಕ್ಕೆ ಮೆಚ್ಚಿಗೆ ಸಹ ವ್ಯಕ್ತವಾಗಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…