ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಿಂಗರಿಸಿದ ದೊಡ್ಡಬಳ್ಳಾಪುರ ಯುವಕರ ತಂಡ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ಅದ್ಧೂರಿ ಬ್ರಹ್ಮರಥೋತ್ಸವ ನಡೆಯಿತು, ಹೂವಿನಿಂದ ಅಲಂಕೃತಗೊಂಡ ಬ್ರಹ್ಮರಥೋತ್ಸವದ ಸೌಂದರ್ಯವನ್ನ ಭಕ್ತರು ಕಣ್ತುಂಬಿ ಕೊಂಡರು. ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸಿದ್ದು ದೊಡ್ಡಬಳ್ಳಾಪುರದ ಯುವಕರ ತಂಡ.

ದೊಡ್ಡಬಳ್ಳಾಪುರ ತಾಲೂಕು ಕಸವನಹಳ್ಳಿಯ ಅಂಬರೀಷ್ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವನ್ನ ಹೂವಿನಿಂದ ಅಲಂಕಾರ ಮಾಡುವ ಅವಕಾಶವನ್ನ ಪಡೆದಿದ್ದಾರೆ. ಮದುವೆ ಸಮಾರಂಭಗಳಿಗೆ ಮಾತ್ರ ಹೂವಿನ ಅಲಂಕಾರ ಮಾಡಿದ ಅನುಭವ ಅಂಬರೀಷ್ ತಂಡಕ್ಕೆ ಇತ್ತು, ಧಾರ್ಮಿಕ ಕಾರ್ಯಗಳಿಗೆ ಯಾವತ್ತು ಹೂವಿನ ಅಲಂಕಾರ ಮಾಡಿರಲಿಲ್ಲ. ಆದರೂ, ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಮತ್ತು ಬ್ರಹ್ಮರಥೋತ್ಸವವನ್ನು ಹೂವಿನ ಅಲಂಕಾರ ಮಾಡುವ ತೀರ್ಮಾನ ಮಾಡಿ, ಹೂವಿನ ಅಲಂಕಾರದ ಆಸೆಯನ್ನು ದೇವಸ್ಥಾನ ಆಡಳಿತ ಮಂಡಳಿಯ ಮುಂದಿಟ್ಟರು, ಕಳೆದ ವರ್ಷ ಅಂಬರೀಷ್ ರವರಿಗೆ ಬ್ರಹ್ಮರಥೋತ್ಸವದ ಅರ್ಧ ಭಾಗದ ಅಲಂಕಾರ ಮಾಡುವ ಅವಕಾಶವನ್ನ ಆಡಳಿತ ನೀಡಿತ್ತು, ಸಿಕ್ಕ ಅವಕಾಶವನ್ನ ಸಮರ್ಥವಾಗಿ ನಿರ್ವಹಿಸಿದ ಅಂಬರೀಶ್ ಮತ್ತು ಅವರ ತಂಡ ಸೈ ಎನಿಸಿಕೊಂಡಿದೆ.

ನವೆಂಬರ್ 29, ಚಂಪಾಷಷ್ಠಿಯಂದು ನಡೆದ ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸುವ ಸಂಪೂರ್ಣ ಜವಾಬ್ದಾರಿ ಅಂಬರೀಷ್ ಪಾಲಿಗೆ ಬಂದಿತು, 50 ಯುವಕ ತಂಡದೊಂದಿಗೆ ಹೂವಿನ ಅಲಂಕಾರ ಪ್ರಾರಂಭಿಸಿದರು. ಚಿಕ್ಕಬಳ್ಳಾಪುರ ಭಾಗದಲ್ಲಿ ಬೆಳೆಯಲಾದ ಸೇವಂತಿಗೆ, ಗುಲಾಬಿ, ಜರ್ಬೆರಾ, ಚೆಂಡು ಹೂ , ಸುಗಂಧರಾಜ ಹೂವನ್ನು ಸೇದಿದಂತೆ ಒಟ್ಟು 15 ಬಗೆಯ ಹೂಗಳನ್ನು ಅಲಂಕಾರಕ್ಕೆ ಬಳಸಿದ್ದಾರೆ, ದೊಡ್ಡಬಳ್ಳಾಪುರ ಯುವಕರ ತಂಡ ಮಾಡಿದ ಹೂವಿನ ಅಲಂಕಾರಕ್ಕೆ ಮೆಚ್ಚಿಗೆ ಸಹ ವ್ಯಕ್ತವಾಗಿದೆ.

Ramesh Babu

Journalist

Recent Posts

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

56 minutes ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

12 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

13 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

17 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

18 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

23 hours ago