ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಿಂಗರಿಸಿದ ದೊಡ್ಡಬಳ್ಳಾಪುರ ಯುವಕರ ತಂಡ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ಅದ್ಧೂರಿ ಬ್ರಹ್ಮರಥೋತ್ಸವ ನಡೆಯಿತು, ಹೂವಿನಿಂದ ಅಲಂಕೃತಗೊಂಡ ಬ್ರಹ್ಮರಥೋತ್ಸವದ ಸೌಂದರ್ಯವನ್ನ ಭಕ್ತರು ಕಣ್ತುಂಬಿ ಕೊಂಡರು. ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸಿದ್ದು ದೊಡ್ಡಬಳ್ಳಾಪುರದ ಯುವಕರ ತಂಡ.

ದೊಡ್ಡಬಳ್ಳಾಪುರ ತಾಲೂಕು ಕಸವನಹಳ್ಳಿಯ ಅಂಬರೀಷ್ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವನ್ನ ಹೂವಿನಿಂದ ಅಲಂಕಾರ ಮಾಡುವ ಅವಕಾಶವನ್ನ ಪಡೆದಿದ್ದಾರೆ. ಮದುವೆ ಸಮಾರಂಭಗಳಿಗೆ ಮಾತ್ರ ಹೂವಿನ ಅಲಂಕಾರ ಮಾಡಿದ ಅನುಭವ ಅಂಬರೀಷ್ ತಂಡಕ್ಕೆ ಇತ್ತು, ಧಾರ್ಮಿಕ ಕಾರ್ಯಗಳಿಗೆ ಯಾವತ್ತು ಹೂವಿನ ಅಲಂಕಾರ ಮಾಡಿರಲಿಲ್ಲ. ಆದರೂ, ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಮತ್ತು ಬ್ರಹ್ಮರಥೋತ್ಸವವನ್ನು ಹೂವಿನ ಅಲಂಕಾರ ಮಾಡುವ ತೀರ್ಮಾನ ಮಾಡಿ, ಹೂವಿನ ಅಲಂಕಾರದ ಆಸೆಯನ್ನು ದೇವಸ್ಥಾನ ಆಡಳಿತ ಮಂಡಳಿಯ ಮುಂದಿಟ್ಟರು, ಕಳೆದ ವರ್ಷ ಅಂಬರೀಷ್ ರವರಿಗೆ ಬ್ರಹ್ಮರಥೋತ್ಸವದ ಅರ್ಧ ಭಾಗದ ಅಲಂಕಾರ ಮಾಡುವ ಅವಕಾಶವನ್ನ ಆಡಳಿತ ನೀಡಿತ್ತು, ಸಿಕ್ಕ ಅವಕಾಶವನ್ನ ಸಮರ್ಥವಾಗಿ ನಿರ್ವಹಿಸಿದ ಅಂಬರೀಶ್ ಮತ್ತು ಅವರ ತಂಡ ಸೈ ಎನಿಸಿಕೊಂಡಿದೆ.

ನವೆಂಬರ್ 29, ಚಂಪಾಷಷ್ಠಿಯಂದು ನಡೆದ ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸುವ ಸಂಪೂರ್ಣ ಜವಾಬ್ದಾರಿ ಅಂಬರೀಷ್ ಪಾಲಿಗೆ ಬಂದಿತು, 50 ಯುವಕ ತಂಡದೊಂದಿಗೆ ಹೂವಿನ ಅಲಂಕಾರ ಪ್ರಾರಂಭಿಸಿದರು. ಚಿಕ್ಕಬಳ್ಳಾಪುರ ಭಾಗದಲ್ಲಿ ಬೆಳೆಯಲಾದ ಸೇವಂತಿಗೆ, ಗುಲಾಬಿ, ಜರ್ಬೆರಾ, ಚೆಂಡು ಹೂ , ಸುಗಂಧರಾಜ ಹೂವನ್ನು ಸೇದಿದಂತೆ ಒಟ್ಟು 15 ಬಗೆಯ ಹೂಗಳನ್ನು ಅಲಂಕಾರಕ್ಕೆ ಬಳಸಿದ್ದಾರೆ, ದೊಡ್ಡಬಳ್ಳಾಪುರ ಯುವಕರ ತಂಡ ಮಾಡಿದ ಹೂವಿನ ಅಲಂಕಾರಕ್ಕೆ ಮೆಚ್ಚಿಗೆ ಸಹ ವ್ಯಕ್ತವಾಗಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago