ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು ಭೇದಿಸಿ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಲೈ 11 ಹಾಗೂ ಜುಲೈ 14ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣಗಳ ತನಿಖೆ ವೇಳೆ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧ ದಾಖಲಾಗಿದ್ದ ಎರಡು ಎಫ್ಐಆರ್ಗಳ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಬಂಧಿತರಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಅಲ್ಯೂಮಿನಿಯಂ ಕೇಬಲ್, ಕಳ್ಳತನಕ್ಕೆ ಬಳಸಿದ್ದ ವಾಹನಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಆರೋಪಿಗಳು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲೂ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ಮುಂದುವರಿದಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ, ಲಕ್ಷ್ಮಿ ನಾರಾಯಣ ಹಾಗೂ ಡಿವೈಎಸ್ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ನೇತೃತ್ವದ ತಂಡವು ಈ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ ಆರೋಪಿಗಳು ಅಂತರರಾಜ್ಯ ಮಟ್ಟದಲ್ಲಿ ಕೇಬಲ್ ಕಳ್ಳತನ ನಡೆಸುತ್ತಿದ್ದ ಜಾಲದ ಆರೋಪಿಗಳಾಗಿದ್ದು, ಇವರ ವಿರುದ್ಧ ಇನ್ನಷ್ಟು ಪ್ರಕರಣಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಆರೋಪಿಗಳ ವಿವರ:
ಎ1, ಮಿಜಾನೂರ್ ರೆಹಮಾನ್ (31), ಅಸ್ಸಾಂ
ಎ2, ಸುಮನ್ (21), ಪಶ್ಚಿಮ ಬಂಗಾಳ
ಎ3, ಕಾಮರೂಲ್ ಮಂಡಲ್(29) ಪಶ್ಚಿಮ ಬಂಗಾಳ
ಎ4, ಅಮಿತ್ ಹಾಲದಾರ್(23) ಛತ್ತೀಸ್ಗಢ
ಎ5, ಸುಮಾನ್ ಶೇಕ್(30) ಪಶ್ಚಿಮ ಬಂಗಾಳ
ಎ6, ರೋಹಿತ್ ಹಾಲ್ದಾರ್(23) ಛತ್ತೀಸ್ಗಢ
ಎ7, ಮಜೀದ್ ಶೇಕ್(44) ಪಶ್ಚಿಮ ಬಂಗಾಳ
ಎ8, ಸಾಯಿದುಲ್ ಶೇಕ್(31) ಪಶ್ಚಿಮ ಬಂಗಾಳ
ಈ ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ನಾರಾಯಣಸ್ವಾಮಿ, ವಿನಾಯಕ ಪಾಟೀಲ್, ನಾಗರಾಜು, ರಾಧಾಕೃಷ್ಣ, ರಂಗನಾಥ, ಸುನೀಲ್ ಭಾಸಗಿ, ಮಂಜುನಾಥ್, ಚಂದ್ರಶೇಖರ, ನಟರಾಜ್, ಸಚಿನ್ ಉಪ್ಪಾರ್, ಪ್ರವೀಣ್ ಸೇರಿದಂತೆ ಇತರರು ಇದ್ದರು.
ಪೊಲೀಸರ ಈ ಕಾರ್ಯಾಚರಣೆಯಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…