ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ.

ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ ನಡೆದ ರಸ್ತೆ ಅಪಘಾತಗಳು ಮತ್ತು ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡ ದುರಂತ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿವೆ.

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್‌ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಧರ್ಮವರಂ ಮೂಲದ ಕೆ. ಜಯಪ್ರಕಾಶ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬ ಸವಾರ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ–48ರ ನವಯುಗ ಟೋಲ್ ಸಮೀಪ ನಾಯಿ ಅಡ್ಡ ಬಂದ ಕಾರಣ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಈ ವೇಳೆ ರಸ್ತೆಗೆ ಬಿದ್ದಿದ್ದ ತುಮಕೂರು ಮೂಲದ ರಂಜನ್ ಕುಮಾರ್ (27) ಅವರ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಉದ್ಯೋಗ ಸಂದರ್ಶನಕ್ಕೆ ತೆರಳುತ್ತಿದ್ದ ಮೋನಿಷಾ (21) ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇನ್ನೊಂದು ಘಟನೆಯಲ್ಲಿ, ಹೊಸಕೋಟೆ ಸಮೀಪದ ದೊಡ್ಡಹುಲ್ಲೂರು ಬಳಿ ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಮರ್ಸಿಡಿಸ್ ಬೆಂಜ್ ಕಾರು ಅಪಘಾತಕ್ಕೀಡಾಗಿ ಕಾರಿನಲ್ಲಿದ್ದ ಯುವತಿ ಶಹಜಿಯಾ ಶೇಖ್(28) ಮತ್ತು ಚಾಲಕ ರಿಜ್ವಾನ್(35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ 10 ವರ್ಷದ ದಕ್ಷಾ ಹಾಗೂ 4 ವರ್ಷದ ಧನುಷ್ ಮೃತಪಟ್ಟಿದ್ದಾರೆ. ಆಟವಾಡಲು ತೆರಳಿದ್ದ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಹೊಂಡಕ್ಕೆ ಸಮರ್ಪಕ ಭದ್ರತೆ ಕಲ್ಪಿಸದ ಆರೋಪದಡಿ ಮಾಲೀಕನ ಮೇಲೆ ಪ್ರಕರಣ ದಾಖಲಾಗಿದೆ.

ಒಟ್ಟಾರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಈ ದುರ್ಘಟನೆಗಳಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

14 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago