ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ.

ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ ನಡೆದ ರಸ್ತೆ ಅಪಘಾತಗಳು ಮತ್ತು ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡ ದುರಂತ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿವೆ.

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್‌ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಧರ್ಮವರಂ ಮೂಲದ ಕೆ. ಜಯಪ್ರಕಾಶ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬ ಸವಾರ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ–48ರ ನವಯುಗ ಟೋಲ್ ಸಮೀಪ ನಾಯಿ ಅಡ್ಡ ಬಂದ ಕಾರಣ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಈ ವೇಳೆ ರಸ್ತೆಗೆ ಬಿದ್ದಿದ್ದ ತುಮಕೂರು ಮೂಲದ ರಂಜನ್ ಕುಮಾರ್ (27) ಅವರ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಉದ್ಯೋಗ ಸಂದರ್ಶನಕ್ಕೆ ತೆರಳುತ್ತಿದ್ದ ಮೋನಿಷಾ (21) ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇನ್ನೊಂದು ಘಟನೆಯಲ್ಲಿ, ಹೊಸಕೋಟೆ ಸಮೀಪದ ದೊಡ್ಡಹುಲ್ಲೂರು ಬಳಿ ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಮರ್ಸಿಡಿಸ್ ಬೆಂಜ್ ಕಾರು ಅಪಘಾತಕ್ಕೀಡಾಗಿ ಕಾರಿನಲ್ಲಿದ್ದ ಯುವತಿ ಶಹಜಿಯಾ ಶೇಖ್(28) ಮತ್ತು ಚಾಲಕ ರಿಜ್ವಾನ್(35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ 10 ವರ್ಷದ ದಕ್ಷಾ ಹಾಗೂ 4 ವರ್ಷದ ಧನುಷ್ ಮೃತಪಟ್ಟಿದ್ದಾರೆ. ಆಟವಾಡಲು ತೆರಳಿದ್ದ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಹೊಂಡಕ್ಕೆ ಸಮರ್ಪಕ ಭದ್ರತೆ ಕಲ್ಪಿಸದ ಆರೋಪದಡಿ ಮಾಲೀಕನ ಮೇಲೆ ಪ್ರಕರಣ ದಾಖಲಾಗಿದೆ.

ಒಟ್ಟಾರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಈ ದುರ್ಘಟನೆಗಳಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

6 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

9 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

21 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

23 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

1 day ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago