ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮಹಮ್ಮದ್ ಹನೀಫ್ ಅವರು ಸೋಮವಾರ ನಗರದ ಹೊರವಲಯದ ಕುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಮಹಮ್ಮದ್ ಹನೀಫ್, ಕಾಂಗ್ರೆಸ್ ಪಕ್ಷದಲ್ಲಿ 1983 ರಿಂದ ನಿಷ್ಠಾವಂತ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ನಸೀರ್ ಅಹಮದ್, ಕೊತ್ತೂರು ಮಂಜುನಾಥ್, ಅನಿಲ್ ಕುಮಾರ್ ಅವರು ನನ್ನ ಮೇಲೆ ನಂಬಿಕೆ ಇಟ್ಟು ಇವತ್ತು ಕುಡಾ ಅಧ್ಯಕ್ಷ ಸ್ಥಾನಕ್ಕೆ ಆಶೀರ್ವಾದ ಮಾಡಿದ್ದಾರೆ. ಅವರುಗಳ ಮಾರ್ಗದರ್ಶನದಲ್ಲಿ ನಗರವನ್ನು ಉತ್ತಮವಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುತ್ತೇನೆ ಎಂದರು.
ಕೋಲಾರ ನಗರವು ಜಿಲ್ಲಾ ಕೇಂದ್ರದಿಂದ ಕೂಡಿದ್ದು, ನಗರದ ಅಭಿವೃದ್ಧಿ ಕುರಿತು ಸಾಕಷ್ಟು ಕನಸುಗಳಿವೆ. ನಗರದಲ್ಲಿನ ರಸ್ತೆಗಳು, ಚರಂಡಿ, ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸುತ್ತೇವೆ. ಬಹಳಷ್ಟು ಮಂದಿ ನಿವೇಶನ ರಹಿತರಿದ್ದಾರೆ. ಅವರೆಲ್ಲರಿಗೂ ನಿವೇಶನ ದೊರೆಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರದಿಂದ ಮಾದರಿ ನಗರವಾಗಿ ರೂಪಿಸಲು ಪ್ರಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.
ಈ ಸಂದರ್ಭದಲ್ಲಿ ಕುಡಾ ಆಯುಕ್ತ ಶ್ರೀನಾಥ್, ಕೋಚಿಮುಲ್ ಮಾಜಿ ಅಧ್ಯಕ್ಷ ಬ್ಯಾಟಪ್ಪ, ಹಾಲಿ ನಿರ್ದೇಶಕ ಷಂಷೀರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಅಲ್ಪಸಂಖ್ಯಾತ ಸಮುದಾಯದ ಮುಖಂಡರಾದ ಅಬ್ದುಲ್ ಖಯ್ಯೂಂ, ಹಿದಾಯತ್ ಉಲ್ಲಾ ಷರೀಫ್, ಟ್ಯಾಕ್ಟರ್ ಮುಸ್ತಫಾ, ಸೈಫ್ ಉಲ್ಲಾ, ಜಬಿಉಲ್ಲಾ, ಚೋಟಾ ಸಾಬ್, ವೈ.ಶಿವಕುಮಾರ್ ಸುರೇಶ್, ಮುಂತಾದವರು ಇದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…