Categories: ಕೋಲಾರ

ಕುಡಾ ಅಧ್ಯಕ್ಷರಾಗಿ ಮಹಮ್ಮದ್ ಹನೀಫ್ ಅಧಿಕಾರ ಸ್ವೀಕಾರ

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮಹಮ್ಮದ್ ಹನೀಫ್ ಅವರು ಸೋಮವಾರ ನಗರದ ಹೊರವಲಯದ ಕುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಮಹಮ್ಮದ್ ಹನೀಫ್, ಕಾಂಗ್ರೆಸ್ ಪಕ್ಷದಲ್ಲಿ 1983 ರಿಂದ ನಿಷ್ಠಾವಂತ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ನಸೀರ್ ಅಹಮದ್, ಕೊತ್ತೂರು ಮಂಜುನಾಥ್, ಅನಿಲ್ ಕುಮಾರ್ ಅವರು ನನ್ನ ಮೇಲೆ ನಂಬಿಕೆ ಇಟ್ಟು ಇವತ್ತು ಕುಡಾ ಅಧ್ಯಕ್ಷ ಸ್ಥಾನಕ್ಕೆ ಆಶೀರ್ವಾದ ಮಾಡಿದ್ದಾರೆ. ಅವರುಗಳ ಮಾರ್ಗದರ್ಶನದಲ್ಲಿ ನಗರವನ್ನು ಉತ್ತಮವಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುತ್ತೇನೆ ಎಂದರು.

ಕೋಲಾರ ನಗರವು ಜಿಲ್ಲಾ ಕೇಂದ್ರದಿಂದ ಕೂಡಿದ್ದು, ನಗರದ ಅಭಿವೃದ್ಧಿ ಕುರಿತು ಸಾಕಷ್ಟು ಕನಸುಗಳಿವೆ. ನಗರದಲ್ಲಿನ ರಸ್ತೆಗಳು, ಚರಂಡಿ, ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸುತ್ತೇವೆ. ಬಹಳಷ್ಟು ಮಂದಿ ನಿವೇಶನ ರಹಿತರಿದ್ದಾರೆ. ಅವರೆಲ್ಲರಿಗೂ ನಿವೇಶನ ದೊರೆಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರದಿಂದ ಮಾದರಿ ನಗರವಾಗಿ ರೂಪಿಸಲು ಪ್ರಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.

ಈ ಸಂದರ್ಭದಲ್ಲಿ ಕುಡಾ ಆಯುಕ್ತ ಶ್ರೀನಾಥ್, ಕೋಚಿಮುಲ್ ಮಾಜಿ ಅಧ್ಯಕ್ಷ ಬ್ಯಾಟಪ್ಪ, ಹಾಲಿ ನಿರ್ದೇಶಕ ಷಂಷೀರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ವಕ್ಕಲೇರಿ ರಾಜಪ್ಪ, ಅಲ್ಪಸಂಖ್ಯಾತ ಸಮುದಾಯದ ಮುಖಂಡರಾದ ಅಬ್ದುಲ್ ಖಯ್ಯೂಂ, ಹಿದಾಯತ್ ಉಲ್ಲಾ ಷರೀಫ್, ಟ್ಯಾಕ್ಟರ್ ಮುಸ್ತಫಾ, ಸೈಫ್ ಉಲ್ಲಾ, ಜಬಿಉಲ್ಲಾ, ಚೋಟಾ ಸಾಬ್, ವೈ.ಶಿವಕುಮಾರ್ ಸುರೇಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

9 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

9 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

14 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

21 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

21 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago