ಕೋಲಾರ: ನಗರದ ಸುತ್ತಲೂ ಬೇಕಾಬಿಟ್ಟಿ ಖಾಸಗಿ ಲೇಔಟ್ ಗಳು ನಿರ್ಮಾಣವಾಗಿವೆ ಕುಡಾ ಮುಂದಾಳತ್ವದಲ್ಲಿ ಮತ್ತೊಂದು ಸರ್ಕಾರಿ ಲೇಔಟ್ ನಿರ್ಮಾಣ ಮಾಡಕ್ಕೆ ನಿಮಗೆಲ್ಲ ಏನು ರೋಗ ಎಂದು ಉಸ್ತುವಾರಿ ಸಚಿವ ಬೈರತಿ ಸುರೇಶ್ ಕುಡಾ ಆಯುಕ್ತ ಶ್ರೀನಾಥ್ ವಿರುದ್ಧ ಕ್ಲಾಸ್ ತೆಗೆದುಕೊಂಡರು
ನಗರದ ಹೊರವಲಯದ ಟಮಕದ ಕುಡಾ ಬಡಾವಣೆಯಲ್ಲಿ ಸೋಮವಾರ 9.80 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಹಾಗೂ ಬಡಾವಣೆಗೆ ಕುಡಿಯುವ ನೀರಿನ ಬೋರ್ ವೆಲ್ ಉದ್ಘಾಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಷ್ಟು ವರ್ಷಗಳದರೂ ಈ ಬಡಾವಣೆಯನ್ನು ಯಾಕೆ ಅಭಿವೃದ್ಧಿ ಮಾಡಿಲ್ಲ ಇಷ್ಟು ನಿರ್ಲಕ್ಷ್ಯ ಮಾಡಿದರೆ ಹೇಗೆ ಕೂಡಲೇ ಯೋಜನೆ ರೂಪಿಸಿಕೊಂಡು ಅಭಿವೃದ್ಧಿಗೆ ಒತ್ತು ನೀಡಿ ಹಣಕ್ಕೆ ಕೊರತೆಯಿಲ್ಲ ಅನುದಾನ ಕೊಡಕ್ಕೆ ಸರ್ಕಾರ ಸಿದ್ದವಿದೆ ಎಂದರು.
ಆಗ ಮಧ್ಯಪ್ರವೇಶಿಸಿದ ಸಂಸದ ಮಲ್ಲೇಶ್ ಬಾಬು ಹಾಗೂ ಎಂಎಲ್ಸಿ ಇಂಚರ ಗೋವಿಂದರಾಜು ಹಿಂದೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಹಣದಿಂದ ಇವತ್ತು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಗುದ್ದಲಿ ಪೂಜೆಗೆ ಶುಕ್ರದೆಸೆ ಬಂದಿದೆ ಎಂದಾಗ ಸಚಿವ ಮಧ್ಯಪ್ರವೇಶಿಸಿ ನೋಡಿ ಹಿಂದೆ ಕೇಂದ್ರ ಸರ್ಕಾರ ನಗರಾಭಿವೃದ್ಧಿ ಇಲಾಖೆಗೆ ಕೊಟ್ಟ ಅನುದಾನವನ್ನು ವಾಪಸ್ಸು ತೆಗೆದುಕೊಂಡಿದೆ ಈಗ ನಮ್ಮ ಕಾಂಗ್ರೆಸ್ ಸರ್ಕಾರದಿಂದ ಬಿಡುಗಡೆಯಾದ ಹಣದಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ನಿಮಗೂ ಜಿಲ್ಲೆಯ ಬಗ್ಗೆ ಕಾಳಜಿ ಇದ್ದರೆ ವಾಪಸ್ಸು ಹೋದ ಅನುದಾನವನ್ನು ಕೊಡಿಸಿಕೊಡಿ ಎಂದರು.
ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು, ಶಾಸಕ ಕೊತ್ತೂರು ಜಿ ಮಂಜುನಾಥ್, ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್, ಇಂಚರ ಗೋವಿಂದರಾಜು, ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ, ಜಿಪಂ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಉಪಾಧ್ಯಕ್ಷೆ ಸಂಗೀತಾ, ಸದಸ್ಯೆ ಶ್ವೇತಾ ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ವಿ.ಗೀತಾ, ಕುರಿಗಳ ರಮೇಶ್, ಕೋಮುಲ್ ಷಂಷೀರ್, ಇರಗಸಂಸ್ರ ವಿಶ್ವನಾಥ್, ಎಂ.ಸಿ ಫಾಲ್ಗುಣ, ಮುಂತಾದವರು ಇದ್ದರು.
ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…