ಕೋಲಾರ: ನಗರದ ಸುತ್ತಲೂ ಬೇಕಾಬಿಟ್ಟಿ ಖಾಸಗಿ ಲೇಔಟ್ ಗಳು ನಿರ್ಮಾಣವಾಗಿವೆ ಕುಡಾ ಮುಂದಾಳತ್ವದಲ್ಲಿ ಮತ್ತೊಂದು ಸರ್ಕಾರಿ ಲೇಔಟ್ ನಿರ್ಮಾಣ ಮಾಡಕ್ಕೆ ನಿಮಗೆಲ್ಲ ಏನು ರೋಗ ಎಂದು ಉಸ್ತುವಾರಿ ಸಚಿವ ಬೈರತಿ ಸುರೇಶ್ ಕುಡಾ ಆಯುಕ್ತ ಶ್ರೀನಾಥ್ ವಿರುದ್ಧ ಕ್ಲಾಸ್ ತೆಗೆದುಕೊಂಡರು
ನಗರದ ಹೊರವಲಯದ ಟಮಕದ ಕುಡಾ ಬಡಾವಣೆಯಲ್ಲಿ ಸೋಮವಾರ 9.80 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಹಾಗೂ ಬಡಾವಣೆಗೆ ಕುಡಿಯುವ ನೀರಿನ ಬೋರ್ ವೆಲ್ ಉದ್ಘಾಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಷ್ಟು ವರ್ಷಗಳದರೂ ಈ ಬಡಾವಣೆಯನ್ನು ಯಾಕೆ ಅಭಿವೃದ್ಧಿ ಮಾಡಿಲ್ಲ ಇಷ್ಟು ನಿರ್ಲಕ್ಷ್ಯ ಮಾಡಿದರೆ ಹೇಗೆ ಕೂಡಲೇ ಯೋಜನೆ ರೂಪಿಸಿಕೊಂಡು ಅಭಿವೃದ್ಧಿಗೆ ಒತ್ತು ನೀಡಿ ಹಣಕ್ಕೆ ಕೊರತೆಯಿಲ್ಲ ಅನುದಾನ ಕೊಡಕ್ಕೆ ಸರ್ಕಾರ ಸಿದ್ದವಿದೆ ಎಂದರು.
ಆಗ ಮಧ್ಯಪ್ರವೇಶಿಸಿದ ಸಂಸದ ಮಲ್ಲೇಶ್ ಬಾಬು ಹಾಗೂ ಎಂಎಲ್ಸಿ ಇಂಚರ ಗೋವಿಂದರಾಜು ಹಿಂದೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಹಣದಿಂದ ಇವತ್ತು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಗುದ್ದಲಿ ಪೂಜೆಗೆ ಶುಕ್ರದೆಸೆ ಬಂದಿದೆ ಎಂದಾಗ ಸಚಿವ ಮಧ್ಯಪ್ರವೇಶಿಸಿ ನೋಡಿ ಹಿಂದೆ ಕೇಂದ್ರ ಸರ್ಕಾರ ನಗರಾಭಿವೃದ್ಧಿ ಇಲಾಖೆಗೆ ಕೊಟ್ಟ ಅನುದಾನವನ್ನು ವಾಪಸ್ಸು ತೆಗೆದುಕೊಂಡಿದೆ ಈಗ ನಮ್ಮ ಕಾಂಗ್ರೆಸ್ ಸರ್ಕಾರದಿಂದ ಬಿಡುಗಡೆಯಾದ ಹಣದಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ನಿಮಗೂ ಜಿಲ್ಲೆಯ ಬಗ್ಗೆ ಕಾಳಜಿ ಇದ್ದರೆ ವಾಪಸ್ಸು ಹೋದ ಅನುದಾನವನ್ನು ಕೊಡಿಸಿಕೊಡಿ ಎಂದರು.
ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು, ಶಾಸಕ ಕೊತ್ತೂರು ಜಿ ಮಂಜುನಾಥ್, ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್, ಇಂಚರ ಗೋವಿಂದರಾಜು, ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ, ಜಿಪಂ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಉಪಾಧ್ಯಕ್ಷೆ ಸಂಗೀತಾ, ಸದಸ್ಯೆ ಶ್ವೇತಾ ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ವಿ.ಗೀತಾ, ಕುರಿಗಳ ರಮೇಶ್, ಕೋಮುಲ್ ಷಂಷೀರ್, ಇರಗಸಂಸ್ರ ವಿಶ್ವನಾಥ್, ಎಂ.ಸಿ ಫಾಲ್ಗುಣ, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…