ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿಗೆ ನಿವೇಶನಗಳಿಗೆ ಅನುಮತಿ ನೀಡಲು 30 ಅಡಿಗಳ ರಸ್ತೆ, ಚರಂಡಿ ಇದ್ದರೆ ಅಷ್ಟೇ ಅನುಮತಿ ನೀಡಬೇಕು ಇಲ್ಲದೇ ಹೋದರೆ ಮುಂದಿನ ತೊಂದರೆಗೆ ನೀವುಗಳೇ ಕಾರಣ ವಾಗಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಕುಡಾ ಕಛೇರಿಯಲ್ಲಿ ಮಂಗಳವಾರ 130 ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನುಮತಿ ಪಡೆಯುವ ಸಂದರ್ಭದಲ್ಲಿ ತಾತ್ಕಾಲಿಕ ರಸ್ತೆ ಇದೆ ಎಂದು ಮನವಿ ಸಲ್ಲಿಸುತ್ತಾರೆ ಅನುಮತಿ ಕೊಟ್ಟ ನಂತರ ರಸ್ತೆಯೂ ಇರಲ್ಲ ಚರಂಡಿ ಇರಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಅಥವಾ ಡಾಂಬರ್ ರಸ್ತೆ ಕಡ್ಡಾಯವಾಗಿ ಇರಬೇಕು ಚರಂಡಿ ಮಾಡಿ ಅದರಿಂದ ನೀರು ಸರಾಗವಾಗಿ ಹರಿಯತ್ತದೆಯೇ ಎಂಬುದನ್ನು ಗಮನಿಸಬೇಕು ಎಂದರು.
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 332 ಖಾಲಿ ನಿವೇಶನಗಳು ಇದ್ದು ಅವುಗಳನ್ನು ಮಾರಾಟ ಮಾಡಲು ಕೂಡಲೇ ಯೋಜನೆ ರೂಪಿಸುವ ಜೊತೆಗೆ ಹೊಸದಾಗಿ ಸರ್ಕಾರಿ ಲೇಔಟ್ ಮಾಡಲು ಕ್ರಮ ವಹಿಸಬೇಕು ಈಗಾಗಲೇ ಸುಮಾರು 10 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಯುಜಿಡಿ, ಪೈಪ್ ಲೈನ್ ಬಗ್ಗೆ ಪರಿಶೀಲನೆ ಮಾಡಬೇಕು ರಸ್ತೆ ಪೂರ್ಣಗೊಂಡ ನಂತರ ಅಗೆಯುವ ಕೆಲಸ ಮಾಡಬೇಡಿ ನಗರಸಭೆ ಮಾಡಿದಂತೆ ನೀವುಗಳು ಅನವಶ್ಯಕ ಖರ್ಚುಗಳನ್ನು ತೋರಿಸಬಾರದು ಕೋಲಾರ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸರ್ಕಾರ ಅಭಿವೃದ್ಧಿಗೆ ಅನುದಾನ ಕೊಡುತ್ತದೆ ಅದನ್ನು ಸಮರ್ಪಕವಾಗಿ ಅಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಮುಂದೆ ಕುಡಾದಿಂದ ಅನುಮತಿ ಪಡೆಯಲು ಪ್ರಾಧಿಕಾರದಿಂದ 30 ಅಡಿಗಳ ರಸ್ತೆ ಕಡ್ಡಾಯ ಮಾಡಬೇಕು ಸಿಸಿ ಕ್ಯಾಮರಾಗಳ ಅಳವಡಿಕೆಗೆ ಕ್ರಮ ವಹಿಸಿ ಒಳ್ಳೆಯ ಲೇಔಟ್ ರೀತಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಆಯುಕ್ತ ಶ್ರೀನಾಥ್, ಅಧಿಕಾರಿಗಳಾದ ಲೋಕೇಶ್, ರಾಮಮೂರ್ತಿ, ಡಾ.ನಾರಾಯಣಸ್ವಾಮಿ, ಮುಂತಾದವರು ಇದ್ದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…