ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿಗೆ ನಿವೇಶನಗಳಿಗೆ ಅನುಮತಿ ನೀಡಲು 30 ಅಡಿಗಳ ರಸ್ತೆ, ಚರಂಡಿ ಇದ್ದರೆ ಅಷ್ಟೇ ಅನುಮತಿ ನೀಡಬೇಕು ಇಲ್ಲದೇ ಹೋದರೆ ಮುಂದಿನ ತೊಂದರೆಗೆ ನೀವುಗಳೇ ಕಾರಣ ವಾಗಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಕುಡಾ ಕಛೇರಿಯಲ್ಲಿ ಮಂಗಳವಾರ 130 ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನುಮತಿ ಪಡೆಯುವ ಸಂದರ್ಭದಲ್ಲಿ ತಾತ್ಕಾಲಿಕ ರಸ್ತೆ ಇದೆ ಎಂದು ಮನವಿ ಸಲ್ಲಿಸುತ್ತಾರೆ ಅನುಮತಿ ಕೊಟ್ಟ ನಂತರ ರಸ್ತೆಯೂ ಇರಲ್ಲ ಚರಂಡಿ ಇರಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಅಥವಾ ಡಾಂಬರ್ ರಸ್ತೆ ಕಡ್ಡಾಯವಾಗಿ ಇರಬೇಕು ಚರಂಡಿ ಮಾಡಿ ಅದರಿಂದ ನೀರು ಸರಾಗವಾಗಿ ಹರಿಯತ್ತದೆಯೇ ಎಂಬುದನ್ನು ಗಮನಿಸಬೇಕು ಎಂದರು.
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 332 ಖಾಲಿ ನಿವೇಶನಗಳು ಇದ್ದು ಅವುಗಳನ್ನು ಮಾರಾಟ ಮಾಡಲು ಕೂಡಲೇ ಯೋಜನೆ ರೂಪಿಸುವ ಜೊತೆಗೆ ಹೊಸದಾಗಿ ಸರ್ಕಾರಿ ಲೇಔಟ್ ಮಾಡಲು ಕ್ರಮ ವಹಿಸಬೇಕು ಈಗಾಗಲೇ ಸುಮಾರು 10 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಯುಜಿಡಿ, ಪೈಪ್ ಲೈನ್ ಬಗ್ಗೆ ಪರಿಶೀಲನೆ ಮಾಡಬೇಕು ರಸ್ತೆ ಪೂರ್ಣಗೊಂಡ ನಂತರ ಅಗೆಯುವ ಕೆಲಸ ಮಾಡಬೇಡಿ ನಗರಸಭೆ ಮಾಡಿದಂತೆ ನೀವುಗಳು ಅನವಶ್ಯಕ ಖರ್ಚುಗಳನ್ನು ತೋರಿಸಬಾರದು ಕೋಲಾರ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸರ್ಕಾರ ಅಭಿವೃದ್ಧಿಗೆ ಅನುದಾನ ಕೊಡುತ್ತದೆ ಅದನ್ನು ಸಮರ್ಪಕವಾಗಿ ಅಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಮುಂದೆ ಕುಡಾದಿಂದ ಅನುಮತಿ ಪಡೆಯಲು ಪ್ರಾಧಿಕಾರದಿಂದ 30 ಅಡಿಗಳ ರಸ್ತೆ ಕಡ್ಡಾಯ ಮಾಡಬೇಕು ಸಿಸಿ ಕ್ಯಾಮರಾಗಳ ಅಳವಡಿಕೆಗೆ ಕ್ರಮ ವಹಿಸಿ ಒಳ್ಳೆಯ ಲೇಔಟ್ ರೀತಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಆಯುಕ್ತ ಶ್ರೀನಾಥ್, ಅಧಿಕಾರಿಗಳಾದ ಲೋಕೇಶ್, ರಾಮಮೂರ್ತಿ, ಡಾ.ನಾರಾಯಣಸ್ವಾಮಿ, ಮುಂತಾದವರು ಇದ್ದರು.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…