ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿಗೆ ನಿವೇಶನಗಳಿಗೆ ಅನುಮತಿ ನೀಡಲು 30 ಅಡಿಗಳ ರಸ್ತೆ, ಚರಂಡಿ ಇದ್ದರೆ ಅಷ್ಟೇ ಅನುಮತಿ ನೀಡಬೇಕು ಇಲ್ಲದೇ ಹೋದರೆ ಮುಂದಿನ ತೊಂದರೆಗೆ ನೀವುಗಳೇ ಕಾರಣ ವಾಗಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಕುಡಾ ಕಛೇರಿಯಲ್ಲಿ ಮಂಗಳವಾರ 130 ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನುಮತಿ ಪಡೆಯುವ ಸಂದರ್ಭದಲ್ಲಿ ತಾತ್ಕಾಲಿಕ ರಸ್ತೆ ಇದೆ ಎಂದು ಮನವಿ ಸಲ್ಲಿಸುತ್ತಾರೆ ಅನುಮತಿ ಕೊಟ್ಟ ನಂತರ ರಸ್ತೆಯೂ ಇರಲ್ಲ ಚರಂಡಿ ಇರಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಅಥವಾ ಡಾಂಬರ್ ರಸ್ತೆ ಕಡ್ಡಾಯವಾಗಿ ಇರಬೇಕು ಚರಂಡಿ ಮಾಡಿ ಅದರಿಂದ ನೀರು ಸರಾಗವಾಗಿ ಹರಿಯತ್ತದೆಯೇ ಎಂಬುದನ್ನು ಗಮನಿಸಬೇಕು ಎಂದರು.
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 332 ಖಾಲಿ ನಿವೇಶನಗಳು ಇದ್ದು ಅವುಗಳನ್ನು ಮಾರಾಟ ಮಾಡಲು ಕೂಡಲೇ ಯೋಜನೆ ರೂಪಿಸುವ ಜೊತೆಗೆ ಹೊಸದಾಗಿ ಸರ್ಕಾರಿ ಲೇಔಟ್ ಮಾಡಲು ಕ್ರಮ ವಹಿಸಬೇಕು ಈಗಾಗಲೇ ಸುಮಾರು 10 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಯುಜಿಡಿ, ಪೈಪ್ ಲೈನ್ ಬಗ್ಗೆ ಪರಿಶೀಲನೆ ಮಾಡಬೇಕು ರಸ್ತೆ ಪೂರ್ಣಗೊಂಡ ನಂತರ ಅಗೆಯುವ ಕೆಲಸ ಮಾಡಬೇಡಿ ನಗರಸಭೆ ಮಾಡಿದಂತೆ ನೀವುಗಳು ಅನವಶ್ಯಕ ಖರ್ಚುಗಳನ್ನು ತೋರಿಸಬಾರದು ಕೋಲಾರ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸರ್ಕಾರ ಅಭಿವೃದ್ಧಿಗೆ ಅನುದಾನ ಕೊಡುತ್ತದೆ ಅದನ್ನು ಸಮರ್ಪಕವಾಗಿ ಅಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಮುಂದೆ ಕುಡಾದಿಂದ ಅನುಮತಿ ಪಡೆಯಲು ಪ್ರಾಧಿಕಾರದಿಂದ 30 ಅಡಿಗಳ ರಸ್ತೆ ಕಡ್ಡಾಯ ಮಾಡಬೇಕು ಸಿಸಿ ಕ್ಯಾಮರಾಗಳ ಅಳವಡಿಕೆಗೆ ಕ್ರಮ ವಹಿಸಿ ಒಳ್ಳೆಯ ಲೇಔಟ್ ರೀತಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಆಯುಕ್ತ ಶ್ರೀನಾಥ್, ಅಧಿಕಾರಿಗಳಾದ ಲೋಕೇಶ್, ರಾಮಮೂರ್ತಿ, ಡಾ.ನಾರಾಯಣಸ್ವಾಮಿ, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…