ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿಗೆ ನಿವೇಶನಗಳಿಗೆ ಅನುಮತಿ ನೀಡಲು 30 ಅಡಿಗಳ ರಸ್ತೆ, ಚರಂಡಿ ಇದ್ದರೆ ಅಷ್ಟೇ ಅನುಮತಿ ನೀಡಬೇಕು ಇಲ್ಲದೇ ಹೋದರೆ ಮುಂದಿನ ತೊಂದರೆಗೆ ನೀವುಗಳೇ ಕಾರಣ ವಾಗಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಕುಡಾ ಕಛೇರಿಯಲ್ಲಿ ಮಂಗಳವಾರ 130 ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನುಮತಿ ಪಡೆಯುವ ಸಂದರ್ಭದಲ್ಲಿ ತಾತ್ಕಾಲಿಕ ರಸ್ತೆ ಇದೆ ಎಂದು ಮನವಿ ಸಲ್ಲಿಸುತ್ತಾರೆ ಅನುಮತಿ ಕೊಟ್ಟ ನಂತರ ರಸ್ತೆಯೂ ಇರಲ್ಲ ಚರಂಡಿ ಇರಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಅಥವಾ ಡಾಂಬರ್ ರಸ್ತೆ ಕಡ್ಡಾಯವಾಗಿ ಇರಬೇಕು ಚರಂಡಿ ಮಾಡಿ ಅದರಿಂದ ನೀರು ಸರಾಗವಾಗಿ ಹರಿಯತ್ತದೆಯೇ ಎಂಬುದನ್ನು ಗಮನಿಸಬೇಕು ಎಂದರು.
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 332 ಖಾಲಿ ನಿವೇಶನಗಳು ಇದ್ದು ಅವುಗಳನ್ನು ಮಾರಾಟ ಮಾಡಲು ಕೂಡಲೇ ಯೋಜನೆ ರೂಪಿಸುವ ಜೊತೆಗೆ ಹೊಸದಾಗಿ ಸರ್ಕಾರಿ ಲೇಔಟ್ ಮಾಡಲು ಕ್ರಮ ವಹಿಸಬೇಕು ಈಗಾಗಲೇ ಸುಮಾರು 10 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಯುಜಿಡಿ, ಪೈಪ್ ಲೈನ್ ಬಗ್ಗೆ ಪರಿಶೀಲನೆ ಮಾಡಬೇಕು ರಸ್ತೆ ಪೂರ್ಣಗೊಂಡ ನಂತರ ಅಗೆಯುವ ಕೆಲಸ ಮಾಡಬೇಡಿ ನಗರಸಭೆ ಮಾಡಿದಂತೆ ನೀವುಗಳು ಅನವಶ್ಯಕ ಖರ್ಚುಗಳನ್ನು ತೋರಿಸಬಾರದು ಕೋಲಾರ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸರ್ಕಾರ ಅಭಿವೃದ್ಧಿಗೆ ಅನುದಾನ ಕೊಡುತ್ತದೆ ಅದನ್ನು ಸಮರ್ಪಕವಾಗಿ ಅಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಮುಂದೆ ಕುಡಾದಿಂದ ಅನುಮತಿ ಪಡೆಯಲು ಪ್ರಾಧಿಕಾರದಿಂದ 30 ಅಡಿಗಳ ರಸ್ತೆ ಕಡ್ಡಾಯ ಮಾಡಬೇಕು ಸಿಸಿ ಕ್ಯಾಮರಾಗಳ ಅಳವಡಿಕೆಗೆ ಕ್ರಮ ವಹಿಸಿ ಒಳ್ಳೆಯ ಲೇಔಟ್ ರೀತಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಆಯುಕ್ತ ಶ್ರೀನಾಥ್, ಅಧಿಕಾರಿಗಳಾದ ಲೋಕೇಶ್, ರಾಮಮೂರ್ತಿ, ಡಾ.ನಾರಾಯಣಸ್ವಾಮಿ, ಮುಂತಾದವರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…