Categories: ಕೋಲಾರ

ಕುಡಾ ವ್ಯಾಪ್ತಿಯಲ್ಲಿ ಅನುಮೋದಿಸುವ ಪ್ರತಿಯೊಂದು ನಿವೇಶನ, ವಾಣಿಜ್ಯ ಮಳಿಗೆಗಳಿಗೆ 30 ಅಡಿ ರಸ್ತೆ, ಚರಂಡಿ ಕಡ್ಡಾಯವಾಗಿರಬೇಕು ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿಗೆ ನಿವೇಶನಗಳಿಗೆ ಅನುಮತಿ ನೀಡಲು 30 ಅಡಿಗಳ ರಸ್ತೆ, ಚರಂಡಿ ಇದ್ದರೆ ಅಷ್ಟೇ ಅನುಮತಿ ನೀಡಬೇಕು ಇಲ್ಲದೇ ಹೋದರೆ ಮುಂದಿನ ತೊಂದರೆಗೆ ನೀವುಗಳೇ ಕಾರಣ ವಾಗಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಕುಡಾ ಕಛೇರಿಯಲ್ಲಿ ಮಂಗಳವಾರ 130 ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನುಮತಿ ಪಡೆಯುವ ಸಂದರ್ಭದಲ್ಲಿ ತಾತ್ಕಾಲಿಕ ರಸ್ತೆ ಇದೆ ಎಂದು ಮನವಿ ಸಲ್ಲಿಸುತ್ತಾರೆ ಅನುಮತಿ ಕೊಟ್ಟ ನಂತರ ರಸ್ತೆಯೂ ಇರಲ್ಲ ಚರಂಡಿ ಇರಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಅಥವಾ ಡಾಂಬರ್ ರಸ್ತೆ ಕಡ್ಡಾಯವಾಗಿ ಇರಬೇಕು ಚರಂಡಿ ಮಾಡಿ ಅದರಿಂದ ನೀರು ಸರಾಗವಾಗಿ ಹರಿಯತ್ತದೆಯೇ ಎಂಬುದನ್ನು ಗಮನಿಸಬೇಕು ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 332 ಖಾಲಿ ನಿವೇಶನಗಳು ಇದ್ದು ಅವುಗಳನ್ನು ಮಾರಾಟ ಮಾಡಲು ಕೂಡಲೇ ಯೋಜನೆ ರೂಪಿಸುವ ಜೊತೆಗೆ ಹೊಸದಾಗಿ ಸರ್ಕಾರಿ ಲೇಔಟ್ ಮಾಡಲು ಕ್ರಮ ವಹಿಸಬೇಕು ಈಗಾಗಲೇ ಸುಮಾರು 10 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಯುಜಿಡಿ, ಪೈಪ್ ಲೈನ್ ಬಗ್ಗೆ ಪರಿಶೀಲನೆ ಮಾಡಬೇಕು ರಸ್ತೆ ಪೂರ್ಣಗೊಂಡ ನಂತರ ಅಗೆಯುವ ಕೆಲಸ ಮಾಡಬೇಡಿ ನಗರಸಭೆ ಮಾಡಿದಂತೆ ನೀವುಗಳು ಅನವಶ್ಯಕ ಖರ್ಚುಗಳನ್ನು ತೋರಿಸಬಾರದು ಕೋಲಾರ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸರ್ಕಾರ ಅಭಿವೃದ್ಧಿಗೆ ಅನುದಾನ ಕೊಡುತ್ತದೆ ಅದನ್ನು ಸಮರ್ಪಕವಾಗಿ ಅಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಮುಂದೆ ಕುಡಾದಿಂದ ಅನುಮತಿ ಪಡೆಯಲು ಪ್ರಾಧಿಕಾರದಿಂದ 30 ಅಡಿಗಳ ರಸ್ತೆ ಕಡ್ಡಾಯ ಮಾಡಬೇಕು ಸಿಸಿ ಕ್ಯಾಮರಾಗಳ ಅಳವಡಿಕೆಗೆ ಕ್ರಮ ವಹಿಸಿ ಒಳ್ಳೆಯ ಲೇಔಟ್ ರೀತಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಆಯುಕ್ತ ಶ್ರೀನಾಥ್, ಅಧಿಕಾರಿಗಳಾದ ಲೋಕೇಶ್, ರಾಮಮೂರ್ತಿ, ಡಾ.ನಾರಾಯಣಸ್ವಾಮಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago