ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿಗೆ ನಿವೇಶನಗಳಿಗೆ ಅನುಮತಿ ನೀಡಲು 30 ಅಡಿಗಳ ರಸ್ತೆ, ಚರಂಡಿ ಇದ್ದರೆ ಅಷ್ಟೇ ಅನುಮತಿ ನೀಡಬೇಕು ಇಲ್ಲದೇ ಹೋದರೆ ಮುಂದಿನ ತೊಂದರೆಗೆ ನೀವುಗಳೇ ಕಾರಣ ವಾಗಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಕುಡಾ ಕಛೇರಿಯಲ್ಲಿ ಮಂಗಳವಾರ 130 ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನುಮತಿ ಪಡೆಯುವ ಸಂದರ್ಭದಲ್ಲಿ ತಾತ್ಕಾಲಿಕ ರಸ್ತೆ ಇದೆ ಎಂದು ಮನವಿ ಸಲ್ಲಿಸುತ್ತಾರೆ ಅನುಮತಿ ಕೊಟ್ಟ ನಂತರ ರಸ್ತೆಯೂ ಇರಲ್ಲ ಚರಂಡಿ ಇರಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಅಥವಾ ಡಾಂಬರ್ ರಸ್ತೆ ಕಡ್ಡಾಯವಾಗಿ ಇರಬೇಕು ಚರಂಡಿ ಮಾಡಿ ಅದರಿಂದ ನೀರು ಸರಾಗವಾಗಿ ಹರಿಯತ್ತದೆಯೇ ಎಂಬುದನ್ನು ಗಮನಿಸಬೇಕು ಎಂದರು.
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 332 ಖಾಲಿ ನಿವೇಶನಗಳು ಇದ್ದು ಅವುಗಳನ್ನು ಮಾರಾಟ ಮಾಡಲು ಕೂಡಲೇ ಯೋಜನೆ ರೂಪಿಸುವ ಜೊತೆಗೆ ಹೊಸದಾಗಿ ಸರ್ಕಾರಿ ಲೇಔಟ್ ಮಾಡಲು ಕ್ರಮ ವಹಿಸಬೇಕು ಈಗಾಗಲೇ ಸುಮಾರು 10 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಯುಜಿಡಿ, ಪೈಪ್ ಲೈನ್ ಬಗ್ಗೆ ಪರಿಶೀಲನೆ ಮಾಡಬೇಕು ರಸ್ತೆ ಪೂರ್ಣಗೊಂಡ ನಂತರ ಅಗೆಯುವ ಕೆಲಸ ಮಾಡಬೇಡಿ ನಗರಸಭೆ ಮಾಡಿದಂತೆ ನೀವುಗಳು ಅನವಶ್ಯಕ ಖರ್ಚುಗಳನ್ನು ತೋರಿಸಬಾರದು ಕೋಲಾರ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸರ್ಕಾರ ಅಭಿವೃದ್ಧಿಗೆ ಅನುದಾನ ಕೊಡುತ್ತದೆ ಅದನ್ನು ಸಮರ್ಪಕವಾಗಿ ಅಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಮುಂದೆ ಕುಡಾದಿಂದ ಅನುಮತಿ ಪಡೆಯಲು ಪ್ರಾಧಿಕಾರದಿಂದ 30 ಅಡಿಗಳ ರಸ್ತೆ ಕಡ್ಡಾಯ ಮಾಡಬೇಕು ಸಿಸಿ ಕ್ಯಾಮರಾಗಳ ಅಳವಡಿಕೆಗೆ ಕ್ರಮ ವಹಿಸಿ ಒಳ್ಳೆಯ ಲೇಔಟ್ ರೀತಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಆಯುಕ್ತ ಶ್ರೀನಾಥ್, ಅಧಿಕಾರಿಗಳಾದ ಲೋಕೇಶ್, ರಾಮಮೂರ್ತಿ, ಡಾ.ನಾರಾಯಣಸ್ವಾಮಿ, ಮುಂತಾದವರು ಇದ್ದರು.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…