ಕುಡಿತದ ನಶೆ: ಸಿಗರೇಟ್ ಕಿಡಿ ತಂದ ಆಪತ್ತು: ಧಗಧಗ ಹೊತ್ತಿ ಉರಿದ ಮನೆ: ಮತ್ತಿನಲ್ಲಿ ಮಲಗಿದ್ದ ವ್ಯಕ್ತಿ ಸುಟ್ಟುಕರಕಲು

 

ವ್ಯಕ್ತಿಯೋರ್ವ ಕುಡಿದ ನಶೆಯಲ್ಲಿ ಸಿಗರೇಟ್ ಸೇದಲು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಪಕ್ಕದಲ್ಲೇ ಇದ್ದ ಬಟ್ಟೆಗಳ ಮೇಲೆ ಬಿದ್ದಿದ್ದು, ಸಿಗರೇಟ್ ಕಿಡಿಗೆ ಮನೆ ಹಾಗೂ ಮನೆಯಲ್ಲಿ ಕುಡಿತದ ಮತ್ತಿನಲ್ಲಿ ಮಲಗಿದ್ದ ವ್ಯಕ್ತಿ ಸಂಪೂರ್ಣ ಸುಟ್ಟುಕರಕಲಾಗಿರುವ ಘಟನೆ ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲ ಕಾಲೋನಿಯಲ್ಲಿ ನಿನ್ನೆ ಸಂಜೆ ಸುಮಾರು 6:30ರಲ್ಲಿ ನಡೆದಿದೆ.

ಉದಯ್ ಕುಮಾರ್(35) ಬೆಂಕಿಯ ಕೆನ್ನಾಲಿಗೆಗೆ ಸುಟ್ಟುಕರಕಲಾದ ವ್ಯಕ್ತಿ.

ಘಟನೆ ವಿವರ 

ನಿನ್ನೆ (ಜು.18) ಸಂಜೆ ಸುಮಾರು 6ಕ್ಕೆ ಸರಿಯಾಗಿ ಕಂಠಪೂರ್ತಿ ಕುಡಿದು ತೂಗಾಡಿಕೊಂಡು ಮನೆಗೆ ಬಂದ ಉದಯ್ ಕುಮಾರ್ ಮಲಗಿದ್ದಾನೆ. ಮನೆಯಲ್ಲಿರುವ ಬಟ್ಟೆಗಳನ್ನೆಲ್ಲಾ ಗುಡ್ಡೆಹಾಕಿದ್ದಾನೆ. ಅದರ ಪಕ್ಕದಲ್ಲೇ ಮತ್ತಿನಲ್ಲಿ ಮಲಗಿದ್ದಾನೆ. ಸ್ವಲ್ಪ ಹೊತ್ತಾದನಂತರ ಸಿಗರೇಟ್ ತೆಗೆದು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಬಟ್ಟೆಗಳ ಗುಡ್ಡೆ ಮೇಲೆ ಬಿದ್ದಿದೆ. ಸುಮಾರು 6:30ರಲ್ಲಿ ಮನೆಯಿಂದ ಹೊಗೆ ಬರಲು ಪ್ರಾರಂಭಿಸಿದೆ. ಮನೆಗೆ ಬೆಂಕಿ ಬಿದ್ದು ಮನೆ ಸೇರಿ‌ ತಾನೂ ಹೊತ್ತಿ ಉರಿಯುತ್ತಿರುವುದು ಈತನ ಗಮನಕ್ಕೆ ಬಂದೇ ಇಲ್ಲ. ಸ್ಥಳೀಯರು ಬಂದು ನೋಡುವಷ್ಟರಲ್ಲಿ ಮನೆ ಪೂರ್ತಿ ಧಗಧಗನೇ ಹೊತ್ತಿ ಉರಿದಿದೆ. ಬೆಂಕಿ ನಂದಿಸಿ, ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದ್ದರಾದರೂ, ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ಉದಯಕುಮಾರ್ ಗಾಯಗಳೊಂದಿಗೆ ಸಾವನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಒದಗಿಬಂದಿದೆ.

ಸದ್ಯ ಈತನ ತಾಯಿ ಸಂಬಂಧಿಕರ ಮನೆಗೆ ತೆರಳಿದ್ದರಂತೆ. ವಿಷಯ ತಿಳಿದ ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

8 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

9 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

10 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

12 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

13 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

1 day ago