ಕುಡಿತದ ನಶೆ: ಸಿಗರೇಟ್ ಕಿಡಿ ತಂದ ಆಪತ್ತು: ಧಗಧಗ ಹೊತ್ತಿ ಉರಿದ ಮನೆ: ಮತ್ತಿನಲ್ಲಿ ಮಲಗಿದ್ದ ವ್ಯಕ್ತಿ ಸುಟ್ಟುಕರಕಲು

 

ವ್ಯಕ್ತಿಯೋರ್ವ ಕುಡಿದ ನಶೆಯಲ್ಲಿ ಸಿಗರೇಟ್ ಸೇದಲು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಪಕ್ಕದಲ್ಲೇ ಇದ್ದ ಬಟ್ಟೆಗಳ ಮೇಲೆ ಬಿದ್ದಿದ್ದು, ಸಿಗರೇಟ್ ಕಿಡಿಗೆ ಮನೆ ಹಾಗೂ ಮನೆಯಲ್ಲಿ ಕುಡಿತದ ಮತ್ತಿನಲ್ಲಿ ಮಲಗಿದ್ದ ವ್ಯಕ್ತಿ ಸಂಪೂರ್ಣ ಸುಟ್ಟುಕರಕಲಾಗಿರುವ ಘಟನೆ ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲ ಕಾಲೋನಿಯಲ್ಲಿ ನಿನ್ನೆ ಸಂಜೆ ಸುಮಾರು 6:30ರಲ್ಲಿ ನಡೆದಿದೆ.

ಉದಯ್ ಕುಮಾರ್(35) ಬೆಂಕಿಯ ಕೆನ್ನಾಲಿಗೆಗೆ ಸುಟ್ಟುಕರಕಲಾದ ವ್ಯಕ್ತಿ.

ಘಟನೆ ವಿವರ 

ನಿನ್ನೆ (ಜು.18) ಸಂಜೆ ಸುಮಾರು 6ಕ್ಕೆ ಸರಿಯಾಗಿ ಕಂಠಪೂರ್ತಿ ಕುಡಿದು ತೂಗಾಡಿಕೊಂಡು ಮನೆಗೆ ಬಂದ ಉದಯ್ ಕುಮಾರ್ ಮಲಗಿದ್ದಾನೆ. ಮನೆಯಲ್ಲಿರುವ ಬಟ್ಟೆಗಳನ್ನೆಲ್ಲಾ ಗುಡ್ಡೆಹಾಕಿದ್ದಾನೆ. ಅದರ ಪಕ್ಕದಲ್ಲೇ ಮತ್ತಿನಲ್ಲಿ ಮಲಗಿದ್ದಾನೆ. ಸ್ವಲ್ಪ ಹೊತ್ತಾದನಂತರ ಸಿಗರೇಟ್ ತೆಗೆದು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಬಟ್ಟೆಗಳ ಗುಡ್ಡೆ ಮೇಲೆ ಬಿದ್ದಿದೆ. ಸುಮಾರು 6:30ರಲ್ಲಿ ಮನೆಯಿಂದ ಹೊಗೆ ಬರಲು ಪ್ರಾರಂಭಿಸಿದೆ. ಮನೆಗೆ ಬೆಂಕಿ ಬಿದ್ದು ಮನೆ ಸೇರಿ‌ ತಾನೂ ಹೊತ್ತಿ ಉರಿಯುತ್ತಿರುವುದು ಈತನ ಗಮನಕ್ಕೆ ಬಂದೇ ಇಲ್ಲ. ಸ್ಥಳೀಯರು ಬಂದು ನೋಡುವಷ್ಟರಲ್ಲಿ ಮನೆ ಪೂರ್ತಿ ಧಗಧಗನೇ ಹೊತ್ತಿ ಉರಿದಿದೆ. ಬೆಂಕಿ ನಂದಿಸಿ, ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದ್ದರಾದರೂ, ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ಉದಯಕುಮಾರ್ ಗಾಯಗಳೊಂದಿಗೆ ಸಾವನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಒದಗಿಬಂದಿದೆ.

ಸದ್ಯ ಈತನ ತಾಯಿ ಸಂಬಂಧಿಕರ ಮನೆಗೆ ತೆರಳಿದ್ದರಂತೆ. ವಿಷಯ ತಿಳಿದ ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

9 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

20 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

24 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

2 days ago