Oplus_0
ವ್ಯಕ್ತಿಯೋರ್ವ ಕುಡಿದ ನಶೆಯಲ್ಲಿ ಸಿಗರೇಟ್ ಸೇದಲು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಪಕ್ಕದಲ್ಲೇ ಇದ್ದ ಬಟ್ಟೆಗಳ ಮೇಲೆ ಬಿದ್ದಿದ್ದು, ಸಿಗರೇಟ್ ಕಿಡಿಗೆ ಮನೆ ಹಾಗೂ ಮನೆಯಲ್ಲಿ ಕುಡಿತದ ಮತ್ತಿನಲ್ಲಿ ಮಲಗಿದ್ದ ವ್ಯಕ್ತಿ ಸಂಪೂರ್ಣ ಸುಟ್ಟುಕರಕಲಾಗಿರುವ ಘಟನೆ ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲ ಕಾಲೋನಿಯಲ್ಲಿ ನಿನ್ನೆ ಸಂಜೆ ಸುಮಾರು 6:30ರಲ್ಲಿ ನಡೆದಿದೆ.
ಉದಯ್ ಕುಮಾರ್(35) ಬೆಂಕಿಯ ಕೆನ್ನಾಲಿಗೆಗೆ ಸುಟ್ಟುಕರಕಲಾದ ವ್ಯಕ್ತಿ.
ಘಟನೆ ವಿವರ
ನಿನ್ನೆ (ಜು.18) ಸಂಜೆ ಸುಮಾರು 6ಕ್ಕೆ ಸರಿಯಾಗಿ ಕಂಠಪೂರ್ತಿ ಕುಡಿದು ತೂಗಾಡಿಕೊಂಡು ಮನೆಗೆ ಬಂದ ಉದಯ್ ಕುಮಾರ್ ಮಲಗಿದ್ದಾನೆ. ಮನೆಯಲ್ಲಿರುವ ಬಟ್ಟೆಗಳನ್ನೆಲ್ಲಾ ಗುಡ್ಡೆಹಾಕಿದ್ದಾನೆ. ಅದರ ಪಕ್ಕದಲ್ಲೇ ಮತ್ತಿನಲ್ಲಿ ಮಲಗಿದ್ದಾನೆ. ಸ್ವಲ್ಪ ಹೊತ್ತಾದನಂತರ ಸಿಗರೇಟ್ ತೆಗೆದು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಬಟ್ಟೆಗಳ ಗುಡ್ಡೆ ಮೇಲೆ ಬಿದ್ದಿದೆ. ಸುಮಾರು 6:30ರಲ್ಲಿ ಮನೆಯಿಂದ ಹೊಗೆ ಬರಲು ಪ್ರಾರಂಭಿಸಿದೆ. ಮನೆಗೆ ಬೆಂಕಿ ಬಿದ್ದು ಮನೆ ಸೇರಿ ತಾನೂ ಹೊತ್ತಿ ಉರಿಯುತ್ತಿರುವುದು ಈತನ ಗಮನಕ್ಕೆ ಬಂದೇ ಇಲ್ಲ. ಸ್ಥಳೀಯರು ಬಂದು ನೋಡುವಷ್ಟರಲ್ಲಿ ಮನೆ ಪೂರ್ತಿ ಧಗಧಗನೇ ಹೊತ್ತಿ ಉರಿದಿದೆ. ಬೆಂಕಿ ನಂದಿಸಿ, ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದ್ದರಾದರೂ, ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ಉದಯಕುಮಾರ್ ಗಾಯಗಳೊಂದಿಗೆ ಸಾವನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಒದಗಿಬಂದಿದೆ.
ಸದ್ಯ ಈತನ ತಾಯಿ ಸಂಬಂಧಿಕರ ಮನೆಗೆ ತೆರಳಿದ್ದರಂತೆ. ವಿಷಯ ತಿಳಿದ ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…