ಕುಡಿತದ ನಶೆ: ಸಿಗರೇಟ್ ಕಿಡಿ ತಂದ ಆಪತ್ತು: ಧಗಧಗ ಹೊತ್ತಿ ಉರಿದ ಮನೆ: ಮತ್ತಿನಲ್ಲಿ ಮಲಗಿದ್ದ ವ್ಯಕ್ತಿ ಸುಟ್ಟುಕರಕಲು

 

ವ್ಯಕ್ತಿಯೋರ್ವ ಕುಡಿದ ನಶೆಯಲ್ಲಿ ಸಿಗರೇಟ್ ಸೇದಲು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಪಕ್ಕದಲ್ಲೇ ಇದ್ದ ಬಟ್ಟೆಗಳ ಮೇಲೆ ಬಿದ್ದಿದ್ದು, ಸಿಗರೇಟ್ ಕಿಡಿಗೆ ಮನೆ ಹಾಗೂ ಮನೆಯಲ್ಲಿ ಕುಡಿತದ ಮತ್ತಿನಲ್ಲಿ ಮಲಗಿದ್ದ ವ್ಯಕ್ತಿ ಸಂಪೂರ್ಣ ಸುಟ್ಟುಕರಕಲಾಗಿರುವ ಘಟನೆ ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲ ಕಾಲೋನಿಯಲ್ಲಿ ನಿನ್ನೆ ಸಂಜೆ ಸುಮಾರು 6:30ರಲ್ಲಿ ನಡೆದಿದೆ.

ಉದಯ್ ಕುಮಾರ್(35) ಬೆಂಕಿಯ ಕೆನ್ನಾಲಿಗೆಗೆ ಸುಟ್ಟುಕರಕಲಾದ ವ್ಯಕ್ತಿ.

ಘಟನೆ ವಿವರ 

ನಿನ್ನೆ (ಜು.18) ಸಂಜೆ ಸುಮಾರು 6ಕ್ಕೆ ಸರಿಯಾಗಿ ಕಂಠಪೂರ್ತಿ ಕುಡಿದು ತೂಗಾಡಿಕೊಂಡು ಮನೆಗೆ ಬಂದ ಉದಯ್ ಕುಮಾರ್ ಮಲಗಿದ್ದಾನೆ. ಮನೆಯಲ್ಲಿರುವ ಬಟ್ಟೆಗಳನ್ನೆಲ್ಲಾ ಗುಡ್ಡೆಹಾಕಿದ್ದಾನೆ. ಅದರ ಪಕ್ಕದಲ್ಲೇ ಮತ್ತಿನಲ್ಲಿ ಮಲಗಿದ್ದಾನೆ. ಸ್ವಲ್ಪ ಹೊತ್ತಾದನಂತರ ಸಿಗರೇಟ್ ತೆಗೆದು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಬಟ್ಟೆಗಳ ಗುಡ್ಡೆ ಮೇಲೆ ಬಿದ್ದಿದೆ. ಸುಮಾರು 6:30ರಲ್ಲಿ ಮನೆಯಿಂದ ಹೊಗೆ ಬರಲು ಪ್ರಾರಂಭಿಸಿದೆ. ಮನೆಗೆ ಬೆಂಕಿ ಬಿದ್ದು ಮನೆ ಸೇರಿ‌ ತಾನೂ ಹೊತ್ತಿ ಉರಿಯುತ್ತಿರುವುದು ಈತನ ಗಮನಕ್ಕೆ ಬಂದೇ ಇಲ್ಲ. ಸ್ಥಳೀಯರು ಬಂದು ನೋಡುವಷ್ಟರಲ್ಲಿ ಮನೆ ಪೂರ್ತಿ ಧಗಧಗನೇ ಹೊತ್ತಿ ಉರಿದಿದೆ. ಬೆಂಕಿ ನಂದಿಸಿ, ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದ್ದರಾದರೂ, ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ಉದಯಕುಮಾರ್ ಗಾಯಗಳೊಂದಿಗೆ ಸಾವನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಒದಗಿಬಂದಿದೆ.

ಸದ್ಯ ಈತನ ತಾಯಿ ಸಂಬಂಧಿಕರ ಮನೆಗೆ ತೆರಳಿದ್ದರಂತೆ. ವಿಷಯ ತಿಳಿದ ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

4 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

5 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

17 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

17 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

18 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

19 hours ago