ಕುಡಿತದ ನಶೆ: ಸಿಗರೇಟ್ ಕಿಡಿ ತಂದ ಆಪತ್ತು: ಧಗಧಗ ಹೊತ್ತಿ ಉರಿದ ಮನೆ: ಮತ್ತಿನಲ್ಲಿ ಮಲಗಿದ್ದ ವ್ಯಕ್ತಿ ಸುಟ್ಟುಕರಕಲು

 

ವ್ಯಕ್ತಿಯೋರ್ವ ಕುಡಿದ ನಶೆಯಲ್ಲಿ ಸಿಗರೇಟ್ ಸೇದಲು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಪಕ್ಕದಲ್ಲೇ ಇದ್ದ ಬಟ್ಟೆಗಳ ಮೇಲೆ ಬಿದ್ದಿದ್ದು, ಸಿಗರೇಟ್ ಕಿಡಿಗೆ ಮನೆ ಹಾಗೂ ಮನೆಯಲ್ಲಿ ಕುಡಿತದ ಮತ್ತಿನಲ್ಲಿ ಮಲಗಿದ್ದ ವ್ಯಕ್ತಿ ಸಂಪೂರ್ಣ ಸುಟ್ಟುಕರಕಲಾಗಿರುವ ಘಟನೆ ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲ ಕಾಲೋನಿಯಲ್ಲಿ ನಿನ್ನೆ ಸಂಜೆ ಸುಮಾರು 6:30ರಲ್ಲಿ ನಡೆದಿದೆ.

ಉದಯ್ ಕುಮಾರ್(35) ಬೆಂಕಿಯ ಕೆನ್ನಾಲಿಗೆಗೆ ಸುಟ್ಟುಕರಕಲಾದ ವ್ಯಕ್ತಿ.

ಘಟನೆ ವಿವರ 

ನಿನ್ನೆ (ಜು.18) ಸಂಜೆ ಸುಮಾರು 6ಕ್ಕೆ ಸರಿಯಾಗಿ ಕಂಠಪೂರ್ತಿ ಕುಡಿದು ತೂಗಾಡಿಕೊಂಡು ಮನೆಗೆ ಬಂದ ಉದಯ್ ಕುಮಾರ್ ಮಲಗಿದ್ದಾನೆ. ಮನೆಯಲ್ಲಿರುವ ಬಟ್ಟೆಗಳನ್ನೆಲ್ಲಾ ಗುಡ್ಡೆಹಾಕಿದ್ದಾನೆ. ಅದರ ಪಕ್ಕದಲ್ಲೇ ಮತ್ತಿನಲ್ಲಿ ಮಲಗಿದ್ದಾನೆ. ಸ್ವಲ್ಪ ಹೊತ್ತಾದನಂತರ ಸಿಗರೇಟ್ ತೆಗೆದು ಬೆಂಕಿ ಹಚ್ಚಿದ್ದಾನೆ. ಸಿಗರೇಟ್ ಕಿಡಿ ಬಟ್ಟೆಗಳ ಗುಡ್ಡೆ ಮೇಲೆ ಬಿದ್ದಿದೆ. ಸುಮಾರು 6:30ರಲ್ಲಿ ಮನೆಯಿಂದ ಹೊಗೆ ಬರಲು ಪ್ರಾರಂಭಿಸಿದೆ. ಮನೆಗೆ ಬೆಂಕಿ ಬಿದ್ದು ಮನೆ ಸೇರಿ‌ ತಾನೂ ಹೊತ್ತಿ ಉರಿಯುತ್ತಿರುವುದು ಈತನ ಗಮನಕ್ಕೆ ಬಂದೇ ಇಲ್ಲ. ಸ್ಥಳೀಯರು ಬಂದು ನೋಡುವಷ್ಟರಲ್ಲಿ ಮನೆ ಪೂರ್ತಿ ಧಗಧಗನೇ ಹೊತ್ತಿ ಉರಿದಿದೆ. ಬೆಂಕಿ ನಂದಿಸಿ, ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದ್ದರಾದರೂ, ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ಉದಯಕುಮಾರ್ ಗಾಯಗಳೊಂದಿಗೆ ಸಾವನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಒದಗಿಬಂದಿದೆ.

ಸದ್ಯ ಈತನ ತಾಯಿ ಸಂಬಂಧಿಕರ ಮನೆಗೆ ತೆರಳಿದ್ದರಂತೆ. ವಿಷಯ ತಿಳಿದ ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

33 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago