ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್.
ಜು.30ರ ಸಂಜೆ 7:30ರ ಸಮಯದಲ್ಲಿ ತನ್ನ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಆಳುಗಳನ್ನು ಕರೆಯಲು ತೂಬಗೆರೆ ಬಸ್ ಸ್ಟಾಂಡ್ ಬಳಿ ಬಂದಾಗ ಅಲ್ಲೇ ಇದ್ದ ಆಟೋ ಡ್ರೈವರ್ ನಿಖಿಲ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾನೆ.
ನನ್ನನ್ನು ನೋಡಿ ಬಾ ಇಲ್ಲಿ ಎಂದು ಕರೆಯುತ್ತಾನೆ, ಆಗ ನನಗೆ ಸ್ವಲ್ಪ ಕೆಲಸ ಇದೆ ಆಮೇಲೆ ಸಿಗುತ್ತೇನೆ ಎಂದು ನನ್ನ ಪಾಡಿಗೆ ನಾನು ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ನೆಪ ಇಟ್ಟುಕೊಂಡು ನಾನು ಕರೆದರೆ ಬರದೇ ನಿನ್ನ ಪಾಡಿಗೆ ನೀನು ಹೋಗುತ್ತಿದ್ದೀಯಾ ಎಷ್ಟು ದುರಾಹಂಕಾರ ಎಂದು ಹೇಳಿ ಹಿಂದೆಯಿಂದ ಬಂದು ಏಕಾಏಕಿ ರೇಜರ್ ನಿಂದ ನನ್ನ ಎಡಗೈ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ರಮೇಶ್ ಆರೋಪಿಸಿದ್ದಾನೆ.
ನಂತರ ನಮ್ಮ ಗ್ರಾಮಸ್ಥರು ಎಲ್ಲಾರೂ ಸೇರಿ ಈ ಬಗ್ಗೆ ನ್ಯಾಯ ಪಂಚಾಯಿತಿ ಮಾಡೋಣಾ ಎಂದು ಹೇಳಿದರು, ಆದರೆ ಇದುವರೆಗೂ ಯಾವುದೇ ರಾಜಿ ಪಂಚಾಯಿತಿ ಮಾಡದ ಕಾರಣ, ತಡವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿರುತ್ತೇನೆ ಎಂದರು. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡಿರೋ ನಿಖಲ್ ಪರಾರಿಯಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…