ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್.
ಜು.30ರ ಸಂಜೆ 7:30ರ ಸಮಯದಲ್ಲಿ ತನ್ನ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಆಳುಗಳನ್ನು ಕರೆಯಲು ತೂಬಗೆರೆ ಬಸ್ ಸ್ಟಾಂಡ್ ಬಳಿ ಬಂದಾಗ ಅಲ್ಲೇ ಇದ್ದ ಆಟೋ ಡ್ರೈವರ್ ನಿಖಿಲ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾನೆ.
ನನ್ನನ್ನು ನೋಡಿ ಬಾ ಇಲ್ಲಿ ಎಂದು ಕರೆಯುತ್ತಾನೆ, ಆಗ ನನಗೆ ಸ್ವಲ್ಪ ಕೆಲಸ ಇದೆ ಆಮೇಲೆ ಸಿಗುತ್ತೇನೆ ಎಂದು ನನ್ನ ಪಾಡಿಗೆ ನಾನು ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ನೆಪ ಇಟ್ಟುಕೊಂಡು ನಾನು ಕರೆದರೆ ಬರದೇ ನಿನ್ನ ಪಾಡಿಗೆ ನೀನು ಹೋಗುತ್ತಿದ್ದೀಯಾ ಎಷ್ಟು ದುರಾಹಂಕಾರ ಎಂದು ಹೇಳಿ ಹಿಂದೆಯಿಂದ ಬಂದು ಏಕಾಏಕಿ ರೇಜರ್ ನಿಂದ ನನ್ನ ಎಡಗೈ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ರಮೇಶ್ ಆರೋಪಿಸಿದ್ದಾನೆ.
ನಂತರ ನಮ್ಮ ಗ್ರಾಮಸ್ಥರು ಎಲ್ಲಾರೂ ಸೇರಿ ಈ ಬಗ್ಗೆ ನ್ಯಾಯ ಪಂಚಾಯಿತಿ ಮಾಡೋಣಾ ಎಂದು ಹೇಳಿದರು, ಆದರೆ ಇದುವರೆಗೂ ಯಾವುದೇ ರಾಜಿ ಪಂಚಾಯಿತಿ ಮಾಡದ ಕಾರಣ, ತಡವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿರುತ್ತೇನೆ ಎಂದರು. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡಿರೋ ನಿಖಲ್ ಪರಾರಿಯಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…