ಕುಡಿದ ನಶೆನಲ್ಲಿ ಅಮಾಯಕ ವ್ಯಕ್ತಿಯ ಮೇಲೆ ರೇಜರ್ ನಿಂದ ಹಲ್ಲೆ

 

ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್.

ಜು.30ರ ಸಂಜೆ 7:30ರ ಸಮಯದಲ್ಲಿ ತನ್ನ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಆಳುಗಳನ್ನು ಕರೆಯಲು ತೂಬಗೆರೆ ಬಸ್ ಸ್ಟಾಂಡ್ ಬಳಿ ಬಂದಾಗ ಅಲ್ಲೇ ಇದ್ದ ಆಟೋ ಡ್ರೈವರ್ ನಿಖಿಲ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾನೆ.

ನನ್ನನ್ನು ನೋಡಿ ಬಾ ಇಲ್ಲಿ‌ ಎಂದು ಕರೆಯುತ್ತಾನೆ, ಆಗ ನನಗೆ ಸ್ವಲ್ಪ ಕೆಲಸ ಇದೆ ಆಮೇಲೆ ಸಿಗುತ್ತೇನೆ ಎಂದು ನನ್ನ ಪಾಡಿಗೆ ನಾನು ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ನೆಪ ಇಟ್ಟುಕೊಂಡು ನಾನು ಕರೆದರೆ ಬರದೇ ನಿನ್ನ ಪಾಡಿಗೆ ನೀನು ಹೋಗುತ್ತಿದ್ದೀಯಾ ಎಷ್ಟು ದುರಾಹಂಕಾರ ಎಂದು ಹೇಳಿ ಹಿಂದೆಯಿಂದ ಬಂದು ಏಕಾಏಕಿ ರೇಜರ್ ನಿಂದ ನನ್ನ ಎಡಗೈ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ರಮೇಶ್ ಆರೋಪಿಸಿದ್ದಾನೆ.

ಇದನ್ನು ಗಮನಿಸಿದ ನನ್ನ ತಮ್ಮ ದರ್ಶನ್, ಹಾಗೂ ಶ್ರೀಧರ್‌ ಓಡಿ ಬಂದರು. ಆಗ ಅಲ್ಲಿಂದ ನಿಖಿಲ್ ಪರಾರಿಯಾದ. ನಂತರ ನನ್ನ ತಾಯಿ ಚಂದ್ರಮ್ಮ ಹಾಗೂ ನನ್ನ ಹೆಂಡತಿ ಚೈತ್ರ ಇಬ್ಬರು ಅಲ್ಲಿಗೆ ಬಂದು ಆಟೋದಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದರು ಎಂದು ಹೇಳಿದ ರಮೇಶ್.

ನಂತರ ನಮ್ಮ ಗ್ರಾಮಸ್ಥರು ಎಲ್ಲಾರೂ ಸೇರಿ ಈ ಬಗ್ಗೆ ನ್ಯಾಯ ಪಂಚಾಯಿತಿ ಮಾಡೋಣಾ ಎಂದು ಹೇಳಿದರು, ಆದರೆ ಇದುವರೆಗೂ ಯಾವುದೇ ರಾಜಿ ಪಂಚಾಯಿತಿ ಮಾಡದ ಕಾರಣ, ತಡವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿರುತ್ತೇನೆ ಎಂದರು. ಈ‌ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡಿರೋ ನಿಖಲ್ ಪರಾರಿಯಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

7 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

8 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

20 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

23 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago