ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್.
ಜು.30ರ ಸಂಜೆ 7:30ರ ಸಮಯದಲ್ಲಿ ತನ್ನ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಆಳುಗಳನ್ನು ಕರೆಯಲು ತೂಬಗೆರೆ ಬಸ್ ಸ್ಟಾಂಡ್ ಬಳಿ ಬಂದಾಗ ಅಲ್ಲೇ ಇದ್ದ ಆಟೋ ಡ್ರೈವರ್ ನಿಖಿಲ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾನೆ.
ನನ್ನನ್ನು ನೋಡಿ ಬಾ ಇಲ್ಲಿ ಎಂದು ಕರೆಯುತ್ತಾನೆ, ಆಗ ನನಗೆ ಸ್ವಲ್ಪ ಕೆಲಸ ಇದೆ ಆಮೇಲೆ ಸಿಗುತ್ತೇನೆ ಎಂದು ನನ್ನ ಪಾಡಿಗೆ ನಾನು ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ನೆಪ ಇಟ್ಟುಕೊಂಡು ನಾನು ಕರೆದರೆ ಬರದೇ ನಿನ್ನ ಪಾಡಿಗೆ ನೀನು ಹೋಗುತ್ತಿದ್ದೀಯಾ ಎಷ್ಟು ದುರಾಹಂಕಾರ ಎಂದು ಹೇಳಿ ಹಿಂದೆಯಿಂದ ಬಂದು ಏಕಾಏಕಿ ರೇಜರ್ ನಿಂದ ನನ್ನ ಎಡಗೈ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ರಮೇಶ್ ಆರೋಪಿಸಿದ್ದಾನೆ.
ನಂತರ ನಮ್ಮ ಗ್ರಾಮಸ್ಥರು ಎಲ್ಲಾರೂ ಸೇರಿ ಈ ಬಗ್ಗೆ ನ್ಯಾಯ ಪಂಚಾಯಿತಿ ಮಾಡೋಣಾ ಎಂದು ಹೇಳಿದರು, ಆದರೆ ಇದುವರೆಗೂ ಯಾವುದೇ ರಾಜಿ ಪಂಚಾಯಿತಿ ಮಾಡದ ಕಾರಣ, ತಡವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿರುತ್ತೇನೆ ಎಂದರು. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡಿರೋ ನಿಖಲ್ ಪರಾರಿಯಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…