ಕುಡಿದ ನಶೆನಲ್ಲಿ ಅಮಾಯಕ ವ್ಯಕ್ತಿಯ ಮೇಲೆ ರೇಜರ್ ನಿಂದ ಹಲ್ಲೆ

 

ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್.

ಜು.30ರ ಸಂಜೆ 7:30ರ ಸಮಯದಲ್ಲಿ ತನ್ನ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಆಳುಗಳನ್ನು ಕರೆಯಲು ತೂಬಗೆರೆ ಬಸ್ ಸ್ಟಾಂಡ್ ಬಳಿ ಬಂದಾಗ ಅಲ್ಲೇ ಇದ್ದ ಆಟೋ ಡ್ರೈವರ್ ನಿಖಿಲ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾನೆ.

ನನ್ನನ್ನು ನೋಡಿ ಬಾ ಇಲ್ಲಿ‌ ಎಂದು ಕರೆಯುತ್ತಾನೆ, ಆಗ ನನಗೆ ಸ್ವಲ್ಪ ಕೆಲಸ ಇದೆ ಆಮೇಲೆ ಸಿಗುತ್ತೇನೆ ಎಂದು ನನ್ನ ಪಾಡಿಗೆ ನಾನು ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ನೆಪ ಇಟ್ಟುಕೊಂಡು ನಾನು ಕರೆದರೆ ಬರದೇ ನಿನ್ನ ಪಾಡಿಗೆ ನೀನು ಹೋಗುತ್ತಿದ್ದೀಯಾ ಎಷ್ಟು ದುರಾಹಂಕಾರ ಎಂದು ಹೇಳಿ ಹಿಂದೆಯಿಂದ ಬಂದು ಏಕಾಏಕಿ ರೇಜರ್ ನಿಂದ ನನ್ನ ಎಡಗೈ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ರಮೇಶ್ ಆರೋಪಿಸಿದ್ದಾನೆ.

ಇದನ್ನು ಗಮನಿಸಿದ ನನ್ನ ತಮ್ಮ ದರ್ಶನ್, ಹಾಗೂ ಶ್ರೀಧರ್‌ ಓಡಿ ಬಂದರು. ಆಗ ಅಲ್ಲಿಂದ ನಿಖಿಲ್ ಪರಾರಿಯಾದ. ನಂತರ ನನ್ನ ತಾಯಿ ಚಂದ್ರಮ್ಮ ಹಾಗೂ ನನ್ನ ಹೆಂಡತಿ ಚೈತ್ರ ಇಬ್ಬರು ಅಲ್ಲಿಗೆ ಬಂದು ಆಟೋದಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದರು ಎಂದು ಹೇಳಿದ ರಮೇಶ್.

ನಂತರ ನಮ್ಮ ಗ್ರಾಮಸ್ಥರು ಎಲ್ಲಾರೂ ಸೇರಿ ಈ ಬಗ್ಗೆ ನ್ಯಾಯ ಪಂಚಾಯಿತಿ ಮಾಡೋಣಾ ಎಂದು ಹೇಳಿದರು, ಆದರೆ ಇದುವರೆಗೂ ಯಾವುದೇ ರಾಜಿ ಪಂಚಾಯಿತಿ ಮಾಡದ ಕಾರಣ, ತಡವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿರುತ್ತೇನೆ ಎಂದರು. ಈ‌ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡಿರೋ ನಿಖಲ್ ಪರಾರಿಯಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

1 hour ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

3 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

4 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

19 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

21 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

24 hours ago