ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್.
ಜು.30ರ ಸಂಜೆ 7:30ರ ಸಮಯದಲ್ಲಿ ತನ್ನ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಆಳುಗಳನ್ನು ಕರೆಯಲು ತೂಬಗೆರೆ ಬಸ್ ಸ್ಟಾಂಡ್ ಬಳಿ ಬಂದಾಗ ಅಲ್ಲೇ ಇದ್ದ ಆಟೋ ಡ್ರೈವರ್ ನಿಖಿಲ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾನೆ.
ನನ್ನನ್ನು ನೋಡಿ ಬಾ ಇಲ್ಲಿ ಎಂದು ಕರೆಯುತ್ತಾನೆ, ಆಗ ನನಗೆ ಸ್ವಲ್ಪ ಕೆಲಸ ಇದೆ ಆಮೇಲೆ ಸಿಗುತ್ತೇನೆ ಎಂದು ನನ್ನ ಪಾಡಿಗೆ ನಾನು ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ನೆಪ ಇಟ್ಟುಕೊಂಡು ನಾನು ಕರೆದರೆ ಬರದೇ ನಿನ್ನ ಪಾಡಿಗೆ ನೀನು ಹೋಗುತ್ತಿದ್ದೀಯಾ ಎಷ್ಟು ದುರಾಹಂಕಾರ ಎಂದು ಹೇಳಿ ಹಿಂದೆಯಿಂದ ಬಂದು ಏಕಾಏಕಿ ರೇಜರ್ ನಿಂದ ನನ್ನ ಎಡಗೈ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ರಮೇಶ್ ಆರೋಪಿಸಿದ್ದಾನೆ.
ನಂತರ ನಮ್ಮ ಗ್ರಾಮಸ್ಥರು ಎಲ್ಲಾರೂ ಸೇರಿ ಈ ಬಗ್ಗೆ ನ್ಯಾಯ ಪಂಚಾಯಿತಿ ಮಾಡೋಣಾ ಎಂದು ಹೇಳಿದರು, ಆದರೆ ಇದುವರೆಗೂ ಯಾವುದೇ ರಾಜಿ ಪಂಚಾಯಿತಿ ಮಾಡದ ಕಾರಣ, ತಡವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿರುತ್ತೇನೆ ಎಂದರು. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡಿರೋ ನಿಖಲ್ ಪರಾರಿಯಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…