ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್.
ಜು.30ರ ಸಂಜೆ 7:30ರ ಸಮಯದಲ್ಲಿ ತನ್ನ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಆಳುಗಳನ್ನು ಕರೆಯಲು ತೂಬಗೆರೆ ಬಸ್ ಸ್ಟಾಂಡ್ ಬಳಿ ಬಂದಾಗ ಅಲ್ಲೇ ಇದ್ದ ಆಟೋ ಡ್ರೈವರ್ ನಿಖಿಲ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾನೆ.
ನನ್ನನ್ನು ನೋಡಿ ಬಾ ಇಲ್ಲಿ ಎಂದು ಕರೆಯುತ್ತಾನೆ, ಆಗ ನನಗೆ ಸ್ವಲ್ಪ ಕೆಲಸ ಇದೆ ಆಮೇಲೆ ಸಿಗುತ್ತೇನೆ ಎಂದು ನನ್ನ ಪಾಡಿಗೆ ನಾನು ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ನೆಪ ಇಟ್ಟುಕೊಂಡು ನಾನು ಕರೆದರೆ ಬರದೇ ನಿನ್ನ ಪಾಡಿಗೆ ನೀನು ಹೋಗುತ್ತಿದ್ದೀಯಾ ಎಷ್ಟು ದುರಾಹಂಕಾರ ಎಂದು ಹೇಳಿ ಹಿಂದೆಯಿಂದ ಬಂದು ಏಕಾಏಕಿ ರೇಜರ್ ನಿಂದ ನನ್ನ ಎಡಗೈ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ರಮೇಶ್ ಆರೋಪಿಸಿದ್ದಾನೆ.
ನಂತರ ನಮ್ಮ ಗ್ರಾಮಸ್ಥರು ಎಲ್ಲಾರೂ ಸೇರಿ ಈ ಬಗ್ಗೆ ನ್ಯಾಯ ಪಂಚಾಯಿತಿ ಮಾಡೋಣಾ ಎಂದು ಹೇಳಿದರು, ಆದರೆ ಇದುವರೆಗೂ ಯಾವುದೇ ರಾಜಿ ಪಂಚಾಯಿತಿ ಮಾಡದ ಕಾರಣ, ತಡವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿರುತ್ತೇನೆ ಎಂದರು. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡಿರೋ ನಿಖಲ್ ಪರಾರಿಯಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…