ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್.
ಜು.30ರ ಸಂಜೆ 7:30ರ ಸಮಯದಲ್ಲಿ ತನ್ನ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಆಳುಗಳನ್ನು ಕರೆಯಲು ತೂಬಗೆರೆ ಬಸ್ ಸ್ಟಾಂಡ್ ಬಳಿ ಬಂದಾಗ ಅಲ್ಲೇ ಇದ್ದ ಆಟೋ ಡ್ರೈವರ್ ನಿಖಿಲ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾನೆ.
ನನ್ನನ್ನು ನೋಡಿ ಬಾ ಇಲ್ಲಿ ಎಂದು ಕರೆಯುತ್ತಾನೆ, ಆಗ ನನಗೆ ಸ್ವಲ್ಪ ಕೆಲಸ ಇದೆ ಆಮೇಲೆ ಸಿಗುತ್ತೇನೆ ಎಂದು ನನ್ನ ಪಾಡಿಗೆ ನಾನು ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ನೆಪ ಇಟ್ಟುಕೊಂಡು ನಾನು ಕರೆದರೆ ಬರದೇ ನಿನ್ನ ಪಾಡಿಗೆ ನೀನು ಹೋಗುತ್ತಿದ್ದೀಯಾ ಎಷ್ಟು ದುರಾಹಂಕಾರ ಎಂದು ಹೇಳಿ ಹಿಂದೆಯಿಂದ ಬಂದು ಏಕಾಏಕಿ ರೇಜರ್ ನಿಂದ ನನ್ನ ಎಡಗೈ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ರಮೇಶ್ ಆರೋಪಿಸಿದ್ದಾನೆ.
ನಂತರ ನಮ್ಮ ಗ್ರಾಮಸ್ಥರು ಎಲ್ಲಾರೂ ಸೇರಿ ಈ ಬಗ್ಗೆ ನ್ಯಾಯ ಪಂಚಾಯಿತಿ ಮಾಡೋಣಾ ಎಂದು ಹೇಳಿದರು, ಆದರೆ ಇದುವರೆಗೂ ಯಾವುದೇ ರಾಜಿ ಪಂಚಾಯಿತಿ ಮಾಡದ ಕಾರಣ, ತಡವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿರುತ್ತೇನೆ ಎಂದರು. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡಿರೋ ನಿಖಲ್ ಪರಾರಿಯಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…