ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್.
ಜು.30ರ ಸಂಜೆ 7:30ರ ಸಮಯದಲ್ಲಿ ತನ್ನ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಆಳುಗಳನ್ನು ಕರೆಯಲು ತೂಬಗೆರೆ ಬಸ್ ಸ್ಟಾಂಡ್ ಬಳಿ ಬಂದಾಗ ಅಲ್ಲೇ ಇದ್ದ ಆಟೋ ಡ್ರೈವರ್ ನಿಖಿಲ್ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾನೆ.
ನನ್ನನ್ನು ನೋಡಿ ಬಾ ಇಲ್ಲಿ ಎಂದು ಕರೆಯುತ್ತಾನೆ, ಆಗ ನನಗೆ ಸ್ವಲ್ಪ ಕೆಲಸ ಇದೆ ಆಮೇಲೆ ಸಿಗುತ್ತೇನೆ ಎಂದು ನನ್ನ ಪಾಡಿಗೆ ನಾನು ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ನೆಪ ಇಟ್ಟುಕೊಂಡು ನಾನು ಕರೆದರೆ ಬರದೇ ನಿನ್ನ ಪಾಡಿಗೆ ನೀನು ಹೋಗುತ್ತಿದ್ದೀಯಾ ಎಷ್ಟು ದುರಾಹಂಕಾರ ಎಂದು ಹೇಳಿ ಹಿಂದೆಯಿಂದ ಬಂದು ಏಕಾಏಕಿ ರೇಜರ್ ನಿಂದ ನನ್ನ ಎಡಗೈ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹಲ್ಲೆಗೊಳಗಾದ ರಮೇಶ್ ಆರೋಪಿಸಿದ್ದಾನೆ.
ನಂತರ ನಮ್ಮ ಗ್ರಾಮಸ್ಥರು ಎಲ್ಲಾರೂ ಸೇರಿ ಈ ಬಗ್ಗೆ ನ್ಯಾಯ ಪಂಚಾಯಿತಿ ಮಾಡೋಣಾ ಎಂದು ಹೇಳಿದರು, ಆದರೆ ಇದುವರೆಗೂ ಯಾವುದೇ ರಾಜಿ ಪಂಚಾಯಿತಿ ಮಾಡದ ಕಾರಣ, ತಡವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿರುತ್ತೇನೆ ಎಂದರು. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡಿರೋ ನಿಖಲ್ ಪರಾರಿಯಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…