ತೆಲಂಗಾಣದ ಹನುಮಕೊಂಡದ ರೆಡ್ಡಿಪುರಂ ಕೋವೆಲಕುಂಟಾ ನಿವಾಸಿಗಳು ಸ್ಥಳೀಯ ಕೆರೆಯಲ್ಲಿ ತೇಲುತ್ತಿರುವ ಶವ ಎಂದು ಆರಂಭದಲ್ಲಿ ನಂಬಿದ್ದನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ.
ಕುಡಿದ ನಶೆಯಲ್ಲಿ ಬರೋಬ್ಬರಿ 5 ಗಂಟೆಗಳ ಕಾಲ ಕೊಳದಲ್ಲಿ ಅಲುಗಾಡದೇ ಸತ್ತ ಹೆಣದ ರೀತಿಯಲ್ಲಿ ಮಲಗಿದ್ದ ವ್ಯಕ್ತಿ ನೆಲ್ಲೂರು ಜಿಲ್ಲೆಯ ಕವಲಿಯ ಕ್ವಾರಿ ಕೆಲಸಗಾರ ಎಂದು ಗುರುತಿಸಲಾಗಿದೆ. ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ನೀರಿನಲ್ಲಿ ಚಲನರಹಿತವಾಗಿ ಬಿದ್ದಿರುವುದು ಕಂಡುಬಂದಿತ್ತು.
ಈ ದೃಶ್ಯದಿಂದ ಆತಂಕಗೊಂಡ ಸ್ಥಳೀಯರು ತಕ್ಷಣವೇ ಕಾಕತೀಯ ವಿಶ್ವವಿದ್ಯಾಲಯ (ಕೆಯು) ಪೊಲೀಸ್ ಮತ್ತು ತುರ್ತು ವೈದ್ಯಕೀಯ ಸೇವೆಗಳಿಗೆ (108 ಸಿಬ್ಬಂದಿ) ಮಾಹಿತಿ ನೀಡಿದರು.
ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದಾಗ ಆರಂಭದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿದರು. ಆದರೆ, ಎಲ್ಲರಿಗೂ ಆಶ್ಚರ್ಯವಾಗುವಂತೆ, ಆ ವ್ಯಕ್ತಿ ಇದ್ದಕ್ಕಿದ್ದಂತೆ ನೀರಿನಿಂದ ಎದ್ದು ಬಂದನು.
ಆ ವ್ಯಕ್ತಿ ಸತ್ತಿಲ್ಲ, ಆದರೆ, ಕಂಠಪೂರ್ತಿ ಕುಡಿದು ನೀರಲ್ಲಿ ಮಲಗಿದ್ದಾನೆ ತಿಳಿದುಬಂದಿದೆ. ನೀರಿನಿಂದ ಎದ್ದು ಬಂದು ಕಳೆದ ಹತ್ತು ದಿನಗಳಿಂದ ಗ್ರಾನೈಟ್ ಕ್ವಾರಿಯಲ್ಲಿ 12 ಗಂಟೆ ಪಾಳಿ ಸಹಿಸಿಕೊಂಡು ಕೆಲಸ ಮಾಡುತ್ತಿದ್ದ ಎಂದು ಪೊಲೀಸರ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ.
ತನ್ನ ಕೆಲಸದ ಒತ್ತಡದಿಂದ ಸ್ವಲ್ಪ ಸುಧಾರಿಸಿಕೊಳ್ಳಲು ಕೊಳದಲ್ಲಿ ಸ್ನಾನ ಮಾಡಲು ನಿರ್ಧರಿಸಿ, ಅಲ್ಲೇ ಕೆಲ ಕಾಲ ನಿದ್ದೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…