ಕುಡಿದ ನಶೆಯಲ್ಲಿ ಬರೋಬ್ಬರಿ 5 ಗಂಟೆಗಳ ಕಾಲ ಕೊಳದಲ್ಲಿ‌ ಅಲುಗಾಡದೇ ಸತ್ತ ಹೆಣದ ರೀತಿಯಲ್ಲಿ ಮಲಗಿದ್ದ ವ್ಯಕ್ತಿ: ಸ್ಥಳೀಯರಲ್ಲಿ ಆತಂಕ: ಪೊಲೀಸರಿಗೆ ಶಾಕ್

ತೆಲಂಗಾಣದ ಹನುಮಕೊಂಡದ ರೆಡ್ಡಿಪುರಂ ಕೋವೆಲಕುಂಟಾ ನಿವಾಸಿಗಳು ಸ್ಥಳೀಯ ಕೆರೆಯಲ್ಲಿ ತೇಲುತ್ತಿರುವ ಶವ ಎಂದು ಆರಂಭದಲ್ಲಿ ನಂಬಿದ್ದನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ.

ಕುಡಿದ ನಶೆಯಲ್ಲಿ ಬರೋಬ್ಬರಿ 5 ಗಂಟೆಗಳ ಕಾಲ ಕೊಳದಲ್ಲಿ‌ ಅಲುಗಾಡದೇ ಸತ್ತ ಹೆಣದ ರೀತಿಯಲ್ಲಿ ಮಲಗಿದ್ದ ವ್ಯಕ್ತಿ ನೆಲ್ಲೂರು ಜಿಲ್ಲೆಯ ಕವಲಿಯ ಕ್ವಾರಿ ಕೆಲಸಗಾರ ಎಂದು ಗುರುತಿಸಲಾಗಿದೆ. ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ನೀರಿನಲ್ಲಿ ಚಲನರಹಿತವಾಗಿ ಬಿದ್ದಿರುವುದು ಕಂಡುಬಂದಿತ್ತು.

ಈ ದೃಶ್ಯದಿಂದ ಆತಂಕಗೊಂಡ ಸ್ಥಳೀಯರು ತಕ್ಷಣವೇ ಕಾಕತೀಯ ವಿಶ್ವವಿದ್ಯಾಲಯ (ಕೆಯು) ಪೊಲೀಸ್ ಮತ್ತು ತುರ್ತು ವೈದ್ಯಕೀಯ ಸೇವೆಗಳಿಗೆ (108 ಸಿಬ್ಬಂದಿ) ಮಾಹಿತಿ ನೀಡಿದರು.

ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದಾಗ ಆರಂಭದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿದರು. ಆದರೆ, ಎಲ್ಲರಿಗೂ ಆಶ್ಚರ್ಯವಾಗುವಂತೆ, ಆ ವ್ಯಕ್ತಿ ಇದ್ದಕ್ಕಿದ್ದಂತೆ ನೀರಿನಿಂದ ಎದ್ದು ಬಂದನು.

ಆ ವ್ಯಕ್ತಿ ಸತ್ತಿಲ್ಲ, ಆದರೆ, ಕಂಠಪೂರ್ತಿ ಕುಡಿದು ನೀರಲ್ಲಿ  ಮಲಗಿದ್ದಾನೆ ತಿಳಿದುಬಂದಿದೆ. ನೀರಿನಿಂದ ಎದ್ದು ಬಂದು  ಕಳೆದ ಹತ್ತು ದಿನಗಳಿಂದ ಗ್ರಾನೈಟ್ ಕ್ವಾರಿಯಲ್ಲಿ 12 ಗಂಟೆ ಪಾಳಿ ಸಹಿಸಿಕೊಂಡು ಕೆಲಸ ಮಾಡುತ್ತಿದ್ದ ಎಂದು ಪೊಲೀಸರ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ.

 ತನ್ನ ಕೆಲಸದ ಒತ್ತಡದಿಂದ ಸ್ವಲ್ಪ ಸುಧಾರಿಸಿಕೊಳ್ಳಲು ಕೊಳದಲ್ಲಿ ಸ್ನಾನ ಮಾಡಲು ನಿರ್ಧರಿಸಿ, ಅಲ್ಲೇ ಕೆಲ ಕಾಲ ನಿದ್ದೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

5 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

5 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

8 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

16 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

18 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago