ತೆಲಂಗಾಣದ ಹನುಮಕೊಂಡದ ರೆಡ್ಡಿಪುರಂ ಕೋವೆಲಕುಂಟಾ ನಿವಾಸಿಗಳು ಸ್ಥಳೀಯ ಕೆರೆಯಲ್ಲಿ ತೇಲುತ್ತಿರುವ ಶವ ಎಂದು ಆರಂಭದಲ್ಲಿ ನಂಬಿದ್ದನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ.
ಕುಡಿದ ನಶೆಯಲ್ಲಿ ಬರೋಬ್ಬರಿ 5 ಗಂಟೆಗಳ ಕಾಲ ಕೊಳದಲ್ಲಿ ಅಲುಗಾಡದೇ ಸತ್ತ ಹೆಣದ ರೀತಿಯಲ್ಲಿ ಮಲಗಿದ್ದ ವ್ಯಕ್ತಿ ನೆಲ್ಲೂರು ಜಿಲ್ಲೆಯ ಕವಲಿಯ ಕ್ವಾರಿ ಕೆಲಸಗಾರ ಎಂದು ಗುರುತಿಸಲಾಗಿದೆ. ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ನೀರಿನಲ್ಲಿ ಚಲನರಹಿತವಾಗಿ ಬಿದ್ದಿರುವುದು ಕಂಡುಬಂದಿತ್ತು.
ಈ ದೃಶ್ಯದಿಂದ ಆತಂಕಗೊಂಡ ಸ್ಥಳೀಯರು ತಕ್ಷಣವೇ ಕಾಕತೀಯ ವಿಶ್ವವಿದ್ಯಾಲಯ (ಕೆಯು) ಪೊಲೀಸ್ ಮತ್ತು ತುರ್ತು ವೈದ್ಯಕೀಯ ಸೇವೆಗಳಿಗೆ (108 ಸಿಬ್ಬಂದಿ) ಮಾಹಿತಿ ನೀಡಿದರು.
ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದಾಗ ಆರಂಭದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿದರು. ಆದರೆ, ಎಲ್ಲರಿಗೂ ಆಶ್ಚರ್ಯವಾಗುವಂತೆ, ಆ ವ್ಯಕ್ತಿ ಇದ್ದಕ್ಕಿದ್ದಂತೆ ನೀರಿನಿಂದ ಎದ್ದು ಬಂದನು.
ಆ ವ್ಯಕ್ತಿ ಸತ್ತಿಲ್ಲ, ಆದರೆ, ಕಂಠಪೂರ್ತಿ ಕುಡಿದು ನೀರಲ್ಲಿ ಮಲಗಿದ್ದಾನೆ ತಿಳಿದುಬಂದಿದೆ. ನೀರಿನಿಂದ ಎದ್ದು ಬಂದು ಕಳೆದ ಹತ್ತು ದಿನಗಳಿಂದ ಗ್ರಾನೈಟ್ ಕ್ವಾರಿಯಲ್ಲಿ 12 ಗಂಟೆ ಪಾಳಿ ಸಹಿಸಿಕೊಂಡು ಕೆಲಸ ಮಾಡುತ್ತಿದ್ದ ಎಂದು ಪೊಲೀಸರ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ.
ತನ್ನ ಕೆಲಸದ ಒತ್ತಡದಿಂದ ಸ್ವಲ್ಪ ಸುಧಾರಿಸಿಕೊಳ್ಳಲು ಕೊಳದಲ್ಲಿ ಸ್ನಾನ ಮಾಡಲು ನಿರ್ಧರಿಸಿ, ಅಲ್ಲೇ ಕೆಲ ಕಾಲ ನಿದ್ದೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…