ತೆಲಂಗಾಣದ ಹನುಮಕೊಂಡದ ರೆಡ್ಡಿಪುರಂ ಕೋವೆಲಕುಂಟಾ ನಿವಾಸಿಗಳು ಸ್ಥಳೀಯ ಕೆರೆಯಲ್ಲಿ ತೇಲುತ್ತಿರುವ ಶವ ಎಂದು ಆರಂಭದಲ್ಲಿ ನಂಬಿದ್ದನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ.
ಕುಡಿದ ನಶೆಯಲ್ಲಿ ಬರೋಬ್ಬರಿ 5 ಗಂಟೆಗಳ ಕಾಲ ಕೊಳದಲ್ಲಿ ಅಲುಗಾಡದೇ ಸತ್ತ ಹೆಣದ ರೀತಿಯಲ್ಲಿ ಮಲಗಿದ್ದ ವ್ಯಕ್ತಿ ನೆಲ್ಲೂರು ಜಿಲ್ಲೆಯ ಕವಲಿಯ ಕ್ವಾರಿ ಕೆಲಸಗಾರ ಎಂದು ಗುರುತಿಸಲಾಗಿದೆ. ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ನೀರಿನಲ್ಲಿ ಚಲನರಹಿತವಾಗಿ ಬಿದ್ದಿರುವುದು ಕಂಡುಬಂದಿತ್ತು.
ಈ ದೃಶ್ಯದಿಂದ ಆತಂಕಗೊಂಡ ಸ್ಥಳೀಯರು ತಕ್ಷಣವೇ ಕಾಕತೀಯ ವಿಶ್ವವಿದ್ಯಾಲಯ (ಕೆಯು) ಪೊಲೀಸ್ ಮತ್ತು ತುರ್ತು ವೈದ್ಯಕೀಯ ಸೇವೆಗಳಿಗೆ (108 ಸಿಬ್ಬಂದಿ) ಮಾಹಿತಿ ನೀಡಿದರು.
ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದಾಗ ಆರಂಭದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿದರು. ಆದರೆ, ಎಲ್ಲರಿಗೂ ಆಶ್ಚರ್ಯವಾಗುವಂತೆ, ಆ ವ್ಯಕ್ತಿ ಇದ್ದಕ್ಕಿದ್ದಂತೆ ನೀರಿನಿಂದ ಎದ್ದು ಬಂದನು.
ಆ ವ್ಯಕ್ತಿ ಸತ್ತಿಲ್ಲ, ಆದರೆ, ಕಂಠಪೂರ್ತಿ ಕುಡಿದು ನೀರಲ್ಲಿ ಮಲಗಿದ್ದಾನೆ ತಿಳಿದುಬಂದಿದೆ. ನೀರಿನಿಂದ ಎದ್ದು ಬಂದು ಕಳೆದ ಹತ್ತು ದಿನಗಳಿಂದ ಗ್ರಾನೈಟ್ ಕ್ವಾರಿಯಲ್ಲಿ 12 ಗಂಟೆ ಪಾಳಿ ಸಹಿಸಿಕೊಂಡು ಕೆಲಸ ಮಾಡುತ್ತಿದ್ದ ಎಂದು ಪೊಲೀಸರ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ.
ತನ್ನ ಕೆಲಸದ ಒತ್ತಡದಿಂದ ಸ್ವಲ್ಪ ಸುಧಾರಿಸಿಕೊಳ್ಳಲು ಕೊಳದಲ್ಲಿ ಸ್ನಾನ ಮಾಡಲು ನಿರ್ಧರಿಸಿ, ಅಲ್ಲೇ ಕೆಲ ಕಾಲ ನಿದ್ದೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…