ತೆಲಂಗಾಣದ ಹನುಮಕೊಂಡದ ರೆಡ್ಡಿಪುರಂ ಕೋವೆಲಕುಂಟಾ ನಿವಾಸಿಗಳು ಸ್ಥಳೀಯ ಕೆರೆಯಲ್ಲಿ ತೇಲುತ್ತಿರುವ ಶವ ಎಂದು ಆರಂಭದಲ್ಲಿ ನಂಬಿದ್ದನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ.
ಕುಡಿದ ನಶೆಯಲ್ಲಿ ಬರೋಬ್ಬರಿ 5 ಗಂಟೆಗಳ ಕಾಲ ಕೊಳದಲ್ಲಿ ಅಲುಗಾಡದೇ ಸತ್ತ ಹೆಣದ ರೀತಿಯಲ್ಲಿ ಮಲಗಿದ್ದ ವ್ಯಕ್ತಿ ನೆಲ್ಲೂರು ಜಿಲ್ಲೆಯ ಕವಲಿಯ ಕ್ವಾರಿ ಕೆಲಸಗಾರ ಎಂದು ಗುರುತಿಸಲಾಗಿದೆ. ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ನೀರಿನಲ್ಲಿ ಚಲನರಹಿತವಾಗಿ ಬಿದ್ದಿರುವುದು ಕಂಡುಬಂದಿತ್ತು.
ಈ ದೃಶ್ಯದಿಂದ ಆತಂಕಗೊಂಡ ಸ್ಥಳೀಯರು ತಕ್ಷಣವೇ ಕಾಕತೀಯ ವಿಶ್ವವಿದ್ಯಾಲಯ (ಕೆಯು) ಪೊಲೀಸ್ ಮತ್ತು ತುರ್ತು ವೈದ್ಯಕೀಯ ಸೇವೆಗಳಿಗೆ (108 ಸಿಬ್ಬಂದಿ) ಮಾಹಿತಿ ನೀಡಿದರು.
ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದಾಗ ಆರಂಭದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿದರು. ಆದರೆ, ಎಲ್ಲರಿಗೂ ಆಶ್ಚರ್ಯವಾಗುವಂತೆ, ಆ ವ್ಯಕ್ತಿ ಇದ್ದಕ್ಕಿದ್ದಂತೆ ನೀರಿನಿಂದ ಎದ್ದು ಬಂದನು.
ಆ ವ್ಯಕ್ತಿ ಸತ್ತಿಲ್ಲ, ಆದರೆ, ಕಂಠಪೂರ್ತಿ ಕುಡಿದು ನೀರಲ್ಲಿ ಮಲಗಿದ್ದಾನೆ ತಿಳಿದುಬಂದಿದೆ. ನೀರಿನಿಂದ ಎದ್ದು ಬಂದು ಕಳೆದ ಹತ್ತು ದಿನಗಳಿಂದ ಗ್ರಾನೈಟ್ ಕ್ವಾರಿಯಲ್ಲಿ 12 ಗಂಟೆ ಪಾಳಿ ಸಹಿಸಿಕೊಂಡು ಕೆಲಸ ಮಾಡುತ್ತಿದ್ದ ಎಂದು ಪೊಲೀಸರ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ.
ತನ್ನ ಕೆಲಸದ ಒತ್ತಡದಿಂದ ಸ್ವಲ್ಪ ಸುಧಾರಿಸಿಕೊಳ್ಳಲು ಕೊಳದಲ್ಲಿ ಸ್ನಾನ ಮಾಡಲು ನಿರ್ಧರಿಸಿ, ಅಲ್ಲೇ ಕೆಲ ಕಾಲ ನಿದ್ದೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…