ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿದ ದುರುಳರು: ಮರ್ಮಾಂಗಕ್ಕೆ ಒದ್ದು, ತಲೆ, ದೇಹದ ವಿವಿಧ ಭಾಗಗಳ ಮೇಲೆ ಹಲ್ಲೆ ನಡೆಸಿ ಕೊಚ್ಚಿ ಕೊಲೆ

ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಗಲಗುರ್ಕಿ ಸಮೀಪ ರೆಸಾರ್ಟ್ ನಲ್ಲಿ ಯುವಕರ ಗುಂಪೊಂದು ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಭಾನುವಾರ (ಜೂ.08) ರಾತ್ರಿ ನಡೆದಿದೆ.

ಕೊಲೆಗೀಡಾದ ವ್ಯಕ್ತಿಯನ್ನು ಅಸ್ಸಾಂ ಮೂಲದ 35 ವರ್ಷದ ಮೋಹನ್ ಎಂದು ಗುರುತಿಸಲಾಗಿದೆ.

ಭಾನುವಾರ ಹ್ಯಾಪಿ ರೀಟ್ರೀಟ್ ರೆಸಾರ್ಟ್ ನಲ್ಲಿ ಪಾರ್ಟಿ ನಡೆಸಿರುವ ಸ್ನೇಹಿತರು ಕುಡಿದ ಮತ್ತಿನಲ್ಲಿ ಮೋಹನ ಎಂಬಾತನ ಮೇಲೆ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಆತನ ಮರ್ಮಾಂಗಕ್ಕೆ ಒದ್ದು ತಲೆ ದೇಹದ ವಿವಿಧ ಭಾಗಗಳ ಮೇಲೆ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ…

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹಾಗೂ ನಂದಿ ಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಕೊಲೆ ಪ್ರಕರಣದ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ..

ಕೊಲೆಯಾದ ಮೋಹನ್ ರೆಸಾರ್ಟ್ ನಲ್ಲಿ ಸಪ್ಲೇಯರ್ ಆಗಿ ಕೆಲಸ ಮಾಡುತ್ತಿದ್ದ. ಆತನ ಸ್ನೇಹಿತರಿಂದಲೇ ಇದೀಗ ಕೊಲೆಯಾಗಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ರೆಸಾರ್ಟ್ ವ್ಯವಸ್ಥಾಪಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

52 minutes ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

2 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

14 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

15 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago