2025ರ ಸೆ.25 ರಂದು ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೂನಮುದ್ದನಹಳ್ಳಿ ಗ್ರಾಮದಲ್ಲಿ, ಮನೆಯಲ್ಲಿದ್ದ ವೃದ್ದೆಯ ಬಳಿ ಬಂದು ಕುಡಿಯಲು ನೀರು ಕೇಳುವ ನೆಪದಲ್ಲಿ , ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದರು…
ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ, ಸರಗಳ್ಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಮಾಯಗಾನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣವಾದ ಠಾಣಾ ಮೊ.ಸಂ:116/2025 ಕಲಂ: 309(4) ರೀತ್ಯಾ ಪ್ರಕರಣದಲ್ಲಿಯು ಸಹ ಭಾಗಿಯಾಗಿರುವುದಾಗಿ ವಿಚಾರಣಾ ಸಮಯದಲ್ಲಿ ತಿಳಿದುಬಂದಿರುತ್ತದೆ.
ಸದರಿ ಎರಡು ಪ್ರಕರಣಗಳಲ್ಲಿ ಒಟ್ಟು ಸುಮಾರು 7,11,000/- ರೂ ಮೌಲ್ಯದ 59.300 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಅಮಾನತು ಪಡಿಸಿಕೊಂಡು, ಒಟ್ಟು 2 ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳಾದ, ಟಿ. ಮುರಳಿ, ಮಹಮದ್ ಅಲ್ಲಾವುದೀನ್, ನರಸಿಂಹ ಮೂರ್ತಿ, ಸಿದ್ದರಾಜು ಮತ್ತು ಸಿಬ್ಬಂದಿ ಮಹೇಶ್, ಲೋಕೇಶ್, ಸುಜಾತ, ಸಮೀವುಲ್ಲ, ಹೆಚ್. ಎನ್ ರವಿ, ರವಿಚಂದ್ರ, ಆಸೀಫ್, ರಮೇಶ್, ನರೇಶ್, ಯಾಸಿನ್ ಸಾಬ್ ನದಾಪ್, ಕುಮಾರ್ & ಶಾರದಮ್ಮ ತಂಡವು ಯಶಸ್ವಿಯಾಗಿರುತ್ತದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…