Categories: ರಾಮನಗರ

ಕುಡಿಯಲು ನೀರು ಕೇಳುವ ನೆಪದಲ್ಲಿ ಸರಗಳ್ಳತನ ಪ್ರಕರಣ- ಮೂವರು ಆರೋಪಿಗಳ ಬಂಧನ, 7,11,000 ರೂ. ಮೌಲ್ಯದ 59.3 ಗ್ರಾಂ ಚಿನ್ನದ ಒಡವೆ ವಶ

2025ರ ಸೆ.25 ರಂದು ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೂನಮುದ್ದನಹಳ್ಳಿ  ಗ್ರಾಮದಲ್ಲಿ, ಮನೆಯಲ್ಲಿದ್ದ  ವೃದ್ದೆಯ ಬಳಿ ಬಂದು ಕುಡಿಯಲು ನೀರು ಕೇಳುವ ನೆಪದಲ್ಲಿ , ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದರು…

ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ, ಸರಗಳ್ಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಮಾಯಗಾನಹಳ್ಳಿ ಗ್ರಾಮದಲ್ಲಿ ನಡೆದಿದ್ದ  ಸರಗಳ್ಳತನ ಪ್ರಕರಣವಾದ ಠಾಣಾ ಮೊ.ಸಂ:116/2025 ಕಲಂ: 309(4) ರೀತ್ಯಾ ಪ್ರಕರಣದಲ್ಲಿಯು ಸಹ ಭಾಗಿಯಾಗಿರುವುದಾಗಿ ವಿಚಾರಣಾ ಸಮಯದಲ್ಲಿ ತಿಳಿದುಬಂದಿರುತ್ತದೆ.

ಸದರಿ ಎರಡು ಪ್ರಕರಣಗಳಲ್ಲಿ ಒಟ್ಟು ಸುಮಾರು 7,11,000/- ರೂ ಮೌಲ್ಯದ 59.300 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಅಮಾನತು ಪಡಿಸಿಕೊಂಡು, ಒಟ್ಟು 2  ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಅಧಿಕಾರಿಗಳಾದ, ಟಿ. ಮುರಳಿ, ಮಹಮದ್‌ ಅಲ್ಲಾವುದೀನ್‌, ನರಸಿಂಹ ಮೂರ್ತಿ, ಸಿದ್ದರಾಜು ಮತ್ತು ಸಿಬ್ಬಂದಿ ಮಹೇಶ್‌, ಲೋಕೇಶ್‌, ಸುಜಾತ, ಸಮೀವುಲ್ಲ, ಹೆಚ್.‌ ಎನ್‌ ರವಿ, ರವಿಚಂದ್ರ, ಆಸೀಫ್‌, ರಮೇಶ್‌, ನರೇಶ್‌, ಯಾಸಿನ್‌ ಸಾಬ್‌ ನದಾಪ್‌, ಕುಮಾರ್‌ & ಶಾರದಮ್ಮ ತಂಡವು ಯಶಸ್ವಿಯಾಗಿರುತ್ತದೆ.

Ramesh Babu

Journalist

Recent Posts

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

11 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

12 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

21 hours ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

1 day ago

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…

1 day ago

ರಘುನಾಥಪುರ ಬಳಿ ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…

2 days ago